ಜಾರ್ಖಂಡ್ : ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಜಾರ್ಖಂಡ್ ನ ಜೆಮ್ಶೆಡ್ಪುರದಲ್ಲಿ ನಡೆದಿರುವುದು ವರದಿಯಾಗಿದೆ.
ಶನಿವಾರ ರಾತ್ರಿಯಿಂದಲೇ ಜೆಮ್ಶೆಡ್ಪುರದ ಶಾಸ್ತ್ರಿನಗರದಲ್ಲಿ ಘರ್ಷಣೆ ಉಂಟಾಗಿದೆ. ರಾಮನವಮಿಯ ಧ್ವಜಕ್ಕೆ ಮಾಂಸದ ತುಂಡು ಕಟ್ಟಿರುವುದನ್ನು ಸ್ಥಳೀಯ ಸಂಘಟನೆಯೊಂದು ನೋಡಿದೆ. ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ, ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದೆ. ಎಲ್ಲಿಯವರೆಗೆ ಅಂದರೆ ಘರ್ಷಣೆ ವಿಕೋಪಕ್ಕೆ ತಿರುಗಿ ಕಿಡಿಗೇಡಿಗಳು ಬ್ಯಾಟ್ ಹಿಡಿದು ಬಂದು, ಇಟ್ಟಿಗೆ ಎಸೆದಿದ್ದಾರೆ. ಇಷ್ಟು ಮಾತ್ರವಲ್ಲದೆ ಎರಡು ಅಂಗಡಿ ಹಾಗೂ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ್ದಾರೆ.ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು, ಗುಂಪನ್ನು ಚದುರಿಸಲು ಅಶ್ರುವಾಯು ಶೆಲ್ಗಳನ್ನು ಹಾರಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಶಾಸ್ತ್ರಿನಗರದಲ್ಲಿ ಸಾಕಷ್ಟು ಪೊಲೀಸ್ ಪಡೆ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾಗ್ರತ ಕ್ರಮವಾಗಿ ಶಾಸ್ತ್ರಿನಗರ ಸಿಆರ್ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…