ಬೆಂಗಳೂರು : ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ವೆಸಗಿರು ಘಟನೆ ವರ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಸಿದಂತೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ.
ಗುಂಜೂರಿನ ಪ್ರತಿಷ್ಠಿತ ಖಾಸಗಿ ಶಾಲೆಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲ ಲ್ಯಾಬರ್ಡ್ ಪುಷ್ಪರಾಜ್ ನನ್ನು ಪೋಕ್ಸೋ ಕಾಯ್ದೆಯಡಿ ಬಂಸಲಾಗಿದೆ.
ನರ ದೌರ್ಬಲ್ಯದ 10 ವರ್ಷದ ವಿದ್ಯಾರ್ಥಿನಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ನಿನ್ನೆ ಬೆಳಗ್ಗೆ ಎಂದಿನಂತೆ 8.30ರ ಸುಮಾರಿಗೆ ಶಾಲೆಗೆ ಹೋದಾಗ ಆರೋಪಿ ಪ್ರಾಂಶುಪಾಲ ಖಾಲಿ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ನಂತರ ಆಕೆಗೆ ಕೇಕ್ ತಿನ್ನಿಸಿದ್ದಾನೆ.
ಮಧ್ಯಾಹ್ನ ಶಾಲೆ ಮುಗಿಸಿಕೊಂಡು 3.30ರ ಸುಮಾರಿಗೆ ವಿದ್ಯಾರ್ಥಿನಿ ಮನೆಗೆ ಹೋದಾಗ ಹೊಟ್ಟೆನೋವು ಕಾಣಿಸಿಕೊಂಡಿದ್ದು ತಾಯಿಗೆ ಹೇಳಿದ್ದಾಳೆ. ತಾಯಿ ಸ್ನಾನ ಮಾಡಿಸಿದ್ದಾಗ ವಿಷಯ ತಿಳಿದು ವಿಚಾರಿಸಿದಾಗ ಶಾಲೆಯಲ್ಲಿ ನಡೆದ ಘಟನೆಯನ್ನು ತಿಳಿಸಿದ್ದಾಳೆ.
ತಕ್ಷಣ ಮಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ನಂತರ ವಿದ್ಯಾರ್ಥಿನಿ ತಾಯಿ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲಿಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…