BREAKING NEWS

10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆ ಪ್ರಾಂಶುಪಾಲ ಬಂಧನ

ಬೆಂಗಳೂರು :  ಖಾಸಗಿ ಶಾಲೆಯೊಂದರ ಪ್ರಾಂಶುಪಾಲ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ವೆಸಗಿರು ಘಟನೆ ವರ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಸಿದಂತೆ ಪ್ರಾಂಶುಪಾಲನನ್ನು ಬಂಧಿಸಲಾಗಿದೆ.

ಗುಂಜೂರಿನ ಪ್ರತಿಷ್ಠಿತ ಖಾಸಗಿ ಶಾಲೆಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲ ಲ್ಯಾಬರ್ಡ್ ಪುಷ್ಪರಾಜ್ ನನ್ನು ಪೋಕ್ಸೋ ಕಾಯ್ದೆಯಡಿ ಬಂಸಲಾಗಿದೆ.

ನರ ದೌರ್ಬಲ್ಯದ 10 ವರ್ಷದ ವಿದ್ಯಾರ್ಥಿನಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ. ನಿನ್ನೆ ಬೆಳಗ್ಗೆ ಎಂದಿನಂತೆ 8.30ರ ಸುಮಾರಿಗೆ ಶಾಲೆಗೆ ಹೋದಾಗ ಆರೋಪಿ ಪ್ರಾಂಶುಪಾಲ ಖಾಲಿ ಕೊಠಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ ನಂತರ ಆಕೆಗೆ ಕೇಕ್ ತಿನ್ನಿಸಿದ್ದಾನೆ.

ಮಧ್ಯಾಹ್ನ ಶಾಲೆ ಮುಗಿಸಿಕೊಂಡು 3.30ರ ಸುಮಾರಿಗೆ ವಿದ್ಯಾರ್ಥಿನಿ ಮನೆಗೆ ಹೋದಾಗ ಹೊಟ್ಟೆನೋವು ಕಾಣಿಸಿಕೊಂಡಿದ್ದು ತಾಯಿಗೆ ಹೇಳಿದ್ದಾಳೆ. ತಾಯಿ ಸ್ನಾನ ಮಾಡಿಸಿದ್ದಾಗ ವಿಷಯ ತಿಳಿದು ವಿಚಾರಿಸಿದಾಗ ಶಾಲೆಯಲ್ಲಿ ನಡೆದ ಘಟನೆಯನ್ನು ತಿಳಿಸಿದ್ದಾಳೆ.

ತಕ್ಷಣ ಮಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ನಂತರ ವಿದ್ಯಾರ್ಥಿನಿ ತಾಯಿ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲಿಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪ್ರಾಂಶುಪಾಲನನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

andolanait

Recent Posts

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 mins ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

25 mins ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

35 mins ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

54 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

1 hour ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

2 hours ago