BREAKING NEWS

ರೆಪೋ ದರ ಏರಿಕೆಯನ್ನು ಸ್ಥಗಿತಗೊಳಿಸಿದ ಆರ್‌ಬಿಐ

ನವದೆಹಲಿ : ರೆಪೋ ದರ ಏರಿಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಪ್ರಕಟಿಸಿದ್ದಾರೆ. ಇದರಿಂದ ಪ್ರಮುಖ ಮಾನದಂಡ ಬಡ್ಡಿ ದರ ಶೇ. 6.5ರಲ್ಲೇ ಉಳಿಯಲಿದೆ. ಕಳೆದ ವರ್ಷದ ಮೇ ತಿಂಗಳಿನಿಂದ ಇಲ್ಲಿಯವರೆಗೆ ಕೇಂದ್ರೀಯ ಬ್ಯಾಂಕ್‌ ಈಗಾಗಲೇ 250 ಮೂಲ ಅಂಕಗಳಷ್ಟು ಬಡ್ಡಿ ದರವನ್ನು ಏರಿಕೆ ಮಾಡಿದೆ.

ಬಡ್ಡಿ ದರ ಏರಿಕೆ ಮೂಲಕ ಆರ್ಥಿಕತೆಯನ್ನು ಬಿಗಿಗೊಳಿಸುತ್ತಿದ್ದ ಸಂದರ್ಭದಲ್ಲಿ ‘ವಿತ್ತೀಯ ನೀತಿ ಕ್ರಿಯೆಯಲ್ಲಿ ಅಕಾಲಿಕ ವಿರಾಮವು ದುಬಾರಿ ನೀತಿ ದೋಷವಾಗಿದೆ’ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದರು. ಆದರೆ ಇದರ ನಡುವೆಯೂ ಅವರು ಗುರುವಾರ ಬಡ್ಡಿ ದರ ಏರಿಕೆಗೆ ವಿರಾಮ ನೀಡುವ ಘೋಷಣೆ ಮಾಡಿದ್ದಾರೆ.

ಹೆಚ್ಚಿನ ಅನಿಶ್ಚಿತತೆಯ ಜಗತ್ತಿನಲ್ಲಿ ವಿತ್ತೀಯ ನೀತಿಯ ಭವಿಷ್ಯದ ತೀರ್ಮಾನಗಳ ಬಗ್ಗೆ ಸ್ಪಷ್ಟ ಸೂಚನೆ ನೀಡುವುದು ಪ್ರತಿಕೂಲವಾಗಿ ಪರಿಣಮಿಸಬಹುದು ಎಂದು ಆರ್‌ಬಿಐ ಗವರ್ನರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಇದಕ್ಕೂ ಮುನ್ನ ಚಿಲ್ಲರೆ ಹಣದುಬ್ಬರವು ಫೆಬ್ರವರಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 6.44ರಷ್ಟು ಇತ್ತು. ಜನವರಿಯಲ್ಲಿ ಇದೇ ಚಿಲ್ಲರೆ ಹಣದುಬ್ಬರ ಶೇ. 6.52ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಫೆಬ್ರವರಿಯಲ್ಲಿ ಹಣದುಬ್ಬರ ಸ್ವಲ್ಪ ಇಳಿಕೆ ಕಂಡಿತ್ತು. ಹೀಗಿದ್ದೂ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಸಹಿಷ್ಣುತಾ ಮಿತಿಯಾದ ಶೇ. 2 ರಿಂದ ಶೇ. 6ಕ್ಕಿಂತ ಹೆಚ್ಚೇ ಇದೆ.

ಅಕಾಲಿಕ ಮಳೆಯು ಆಹಾರದ ಬೆಲೆಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇದರ ಜತೆಗೆ ಒಪೆಕ್‌ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದು, ಇದು ಹಣದುಬ್ಬರ ದರವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಭಾರತದ ಉತ್ಪಾದನಾ ವಿಭಾಗವು ಮಾರ್ಚ್‌ನಲ್ಲಿ ಮೂರು ತಿಂಗಳುಗಳಲ್ಲೇ ವೇಗದ ಬೆಳವಣಿಗೆಗೆ ಸಾಕ್ಷಿಯಾಗಿತ್ತು. ಆದರೆ ಸೇವಾ ವಲಯದ ಬೆಳವಣಿಗೆಯು ಫೆಬ್ರವರಿಯಲ್ಲಿದ್ದ 12 ವರ್ಷಗಳ ಗರಿಷ್ಠ ಮಟ್ಟದಿಂದ ಮಾರ್ಚ್‌ನಲ್ಲಿ ಸ್ವಲ್ಪಮಟ್ಟಿಗೆ ನಿಧಾನಗೊಂಡಿದೆ ಎಂದು ಎಸ್‌&ಪಿ ಗ್ಲೋಬಲ್ ನಡೆಸಿದ ಖಾಸಗಿ ವ್ಯಾಪಾರ ಸಮೀಕ್ಷೆಯು ತಿಳಿಸಿತ್ತು.

ಅಮೆರಿಕ ಮತ್ತು ಯುರೋಪ್‌ನ ಬ್ಯಾಂಕಿಂಗ್ ವಲಯದ ಬಿಕ್ಕಟ್ಟು ಬಿಗಿಯಾದ ಆರ್ಥಿಕ ಪರಿಸ್ಥಿತಿಗಳಿಗೆ ಮತ್ತು ಆರ್ಥಿಕತೆಯಲ್ಲಿ ತೀವ್ರ ಜಾಗತಿಕ ಮಂದಗತಿಗೆ ಕಾರಣವಾಗಬಹುದು ಎಂದು ಹಲವು ಆರ್ಥಿಕ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಆಮದುಗಳ ಸರಾಗಗೊಳಿಸುವಿಕೆ ಮತ್ತು ಬ್ಯಾಂಕ್ ಸಾಲದ ಬೇಡಿಕೆ ಕಡಿಮೆಯಾಗಿರುವುದು ನಿಧಾನಗತಿಯ ಆರ್ಥಿಕತೆಯ ಆರಂಭಿಕ ಚಿಹ್ನೆಗಳಾಗಿವೆ ಎಂದು ತಜ್ಞರು ಅಂದಾಜಿಸಿದ್ದಾರೆ.

ಇವೆಲ್ಲದರ ನಡುವೆಯೇ ಮಾರ್ಚ್ ಅಂತ್ಯದ ವೇಳೆಗೆ ಕೊರತೆಯನ್ನು ಎದುರಿಸಿದ್ದ ಬ್ಯಾಂಕಿಂಗ್ ವ್ಯವಸ್ಥೆಯ ಹಣಕಾಸು ಲಭ್ಯತೆ ಸುಧಾರಿಸಿರುವುದು ಆಶಾದಾಯ ಬೆಳವಣಿಗೆಯಾಗಿದೆ.

lokesh

Recent Posts

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಮೃತಪಟ್ಟಿತು. ಅದಕ್ಕೆ 10…

17 mins ago

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

30 mins ago

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

56 mins ago

ಅಧಿಕಾರ ಹಂಚಿಕೆ ಪ್ರಸ್ತಾವವೇ ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್‌

ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ…

1 hour ago

ಅಧಿಕಾರ ಯಾರಿಗೂ ಶಾಶ್ವತ ಅಲ್ಲ : ಯತೀಂದ್ರಗೆ ಟಾಂಗ್‌ ನೀಡಿದ ಶಾಸಕ ತನ್ವೀರ್‌

ಮೈಸೂರು : ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಒಪ್ಪುತ್ತೇವೆ ಎಂದು ಶಾಸಕ ತನ್ವೀರ್‌ಸೇಠ್ ಹೇಳಿದರು. 5…

1 hour ago

ಮೈಸೂರು | ಉಯಯಗಿರಿ, ಕುವೆಂಪುನಗರಕ್ಕೆ ಮತ್ತೊಂದು ಠಾಣೆ, ಅಗತ್ಯ ಸೌಲಭ್ಯಕ್ಕೆ ಬದ್ಧ ; ಹೋಂ ಮಿನಿಸ್ಟರ್‌

ಮೈಸೂರು : ಬೆಂಗಳೂರಿನಲ್ಲಿ ಸಂಚಾರ ಉಲ್ಲಂಘನೆಯ ಪ್ರಕರಣಗಳಲ್ಲಿ ವಸೂಲಾಗುವ ಶುಲ್ಕದ ಮೊತ್ತದಲ್ಲಿ ಶೇ.50ರಷ್ಟು ಸರ್ಕಾರಕ್ಕೆ ಮತ್ತು ಇಲಾಖೆಯಲ್ಲಿ ಬಳಸಲಾಗುತ್ತಿದ್ದು, ಅದೇ…

2 hours ago