BREAKING NEWS

ರೆಪೋ ದರ ಏರಿಕೆಯನ್ನು ಸ್ಥಗಿತಗೊಳಿಸಿದ ಆರ್‌ಬಿಐ

ನವದೆಹಲಿ : ರೆಪೋ ದರ ಏರಿಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಪ್ರಕಟಿಸಿದ್ದಾರೆ. ಇದರಿಂದ ಪ್ರಮುಖ ಮಾನದಂಡ ಬಡ್ಡಿ ದರ ಶೇ. 6.5ರಲ್ಲೇ ಉಳಿಯಲಿದೆ. ಕಳೆದ ವರ್ಷದ ಮೇ ತಿಂಗಳಿನಿಂದ ಇಲ್ಲಿಯವರೆಗೆ ಕೇಂದ್ರೀಯ ಬ್ಯಾಂಕ್‌ ಈಗಾಗಲೇ 250 ಮೂಲ ಅಂಕಗಳಷ್ಟು ಬಡ್ಡಿ ದರವನ್ನು ಏರಿಕೆ ಮಾಡಿದೆ.

ಬಡ್ಡಿ ದರ ಏರಿಕೆ ಮೂಲಕ ಆರ್ಥಿಕತೆಯನ್ನು ಬಿಗಿಗೊಳಿಸುತ್ತಿದ್ದ ಸಂದರ್ಭದಲ್ಲಿ ‘ವಿತ್ತೀಯ ನೀತಿ ಕ್ರಿಯೆಯಲ್ಲಿ ಅಕಾಲಿಕ ವಿರಾಮವು ದುಬಾರಿ ನೀತಿ ದೋಷವಾಗಿದೆ’ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದರು. ಆದರೆ ಇದರ ನಡುವೆಯೂ ಅವರು ಗುರುವಾರ ಬಡ್ಡಿ ದರ ಏರಿಕೆಗೆ ವಿರಾಮ ನೀಡುವ ಘೋಷಣೆ ಮಾಡಿದ್ದಾರೆ.

ಹೆಚ್ಚಿನ ಅನಿಶ್ಚಿತತೆಯ ಜಗತ್ತಿನಲ್ಲಿ ವಿತ್ತೀಯ ನೀತಿಯ ಭವಿಷ್ಯದ ತೀರ್ಮಾನಗಳ ಬಗ್ಗೆ ಸ್ಪಷ್ಟ ಸೂಚನೆ ನೀಡುವುದು ಪ್ರತಿಕೂಲವಾಗಿ ಪರಿಣಮಿಸಬಹುದು ಎಂದು ಆರ್‌ಬಿಐ ಗವರ್ನರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಇದಕ್ಕೂ ಮುನ್ನ ಚಿಲ್ಲರೆ ಹಣದುಬ್ಬರವು ಫೆಬ್ರವರಿಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 6.44ರಷ್ಟು ಇತ್ತು. ಜನವರಿಯಲ್ಲಿ ಇದೇ ಚಿಲ್ಲರೆ ಹಣದುಬ್ಬರ ಶೇ. 6.52ರಷ್ಟಿತ್ತು. ಇದಕ್ಕೆ ಹೋಲಿಸಿದರೆ ಫೆಬ್ರವರಿಯಲ್ಲಿ ಹಣದುಬ್ಬರ ಸ್ವಲ್ಪ ಇಳಿಕೆ ಕಂಡಿತ್ತು. ಹೀಗಿದ್ದೂ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಸಹಿಷ್ಣುತಾ ಮಿತಿಯಾದ ಶೇ. 2 ರಿಂದ ಶೇ. 6ಕ್ಕಿಂತ ಹೆಚ್ಚೇ ಇದೆ.

ಅಕಾಲಿಕ ಮಳೆಯು ಆಹಾರದ ಬೆಲೆಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಇದರ ಜತೆಗೆ ಒಪೆಕ್‌ ತೈಲ ಉತ್ಪಾದನೆಯನ್ನು ಕಡಿತಗೊಳಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದು, ಇದು ಹಣದುಬ್ಬರ ದರವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ. ಭಾರತದ ಉತ್ಪಾದನಾ ವಿಭಾಗವು ಮಾರ್ಚ್‌ನಲ್ಲಿ ಮೂರು ತಿಂಗಳುಗಳಲ್ಲೇ ವೇಗದ ಬೆಳವಣಿಗೆಗೆ ಸಾಕ್ಷಿಯಾಗಿತ್ತು. ಆದರೆ ಸೇವಾ ವಲಯದ ಬೆಳವಣಿಗೆಯು ಫೆಬ್ರವರಿಯಲ್ಲಿದ್ದ 12 ವರ್ಷಗಳ ಗರಿಷ್ಠ ಮಟ್ಟದಿಂದ ಮಾರ್ಚ್‌ನಲ್ಲಿ ಸ್ವಲ್ಪಮಟ್ಟಿಗೆ ನಿಧಾನಗೊಂಡಿದೆ ಎಂದು ಎಸ್‌&ಪಿ ಗ್ಲೋಬಲ್ ನಡೆಸಿದ ಖಾಸಗಿ ವ್ಯಾಪಾರ ಸಮೀಕ್ಷೆಯು ತಿಳಿಸಿತ್ತು.

ಅಮೆರಿಕ ಮತ್ತು ಯುರೋಪ್‌ನ ಬ್ಯಾಂಕಿಂಗ್ ವಲಯದ ಬಿಕ್ಕಟ್ಟು ಬಿಗಿಯಾದ ಆರ್ಥಿಕ ಪರಿಸ್ಥಿತಿಗಳಿಗೆ ಮತ್ತು ಆರ್ಥಿಕತೆಯಲ್ಲಿ ತೀವ್ರ ಜಾಗತಿಕ ಮಂದಗತಿಗೆ ಕಾರಣವಾಗಬಹುದು ಎಂದು ಹಲವು ಆರ್ಥಿಕ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಭಾರತದಲ್ಲಿ ಆಮದುಗಳ ಸರಾಗಗೊಳಿಸುವಿಕೆ ಮತ್ತು ಬ್ಯಾಂಕ್ ಸಾಲದ ಬೇಡಿಕೆ ಕಡಿಮೆಯಾಗಿರುವುದು ನಿಧಾನಗತಿಯ ಆರ್ಥಿಕತೆಯ ಆರಂಭಿಕ ಚಿಹ್ನೆಗಳಾಗಿವೆ ಎಂದು ತಜ್ಞರು ಅಂದಾಜಿಸಿದ್ದಾರೆ.

ಇವೆಲ್ಲದರ ನಡುವೆಯೇ ಮಾರ್ಚ್ ಅಂತ್ಯದ ವೇಳೆಗೆ ಕೊರತೆಯನ್ನು ಎದುರಿಸಿದ್ದ ಬ್ಯಾಂಕಿಂಗ್ ವ್ಯವಸ್ಥೆಯ ಹಣಕಾಸು ಲಭ್ಯತೆ ಸುಧಾರಿಸಿರುವುದು ಆಶಾದಾಯ ಬೆಳವಣಿಗೆಯಾಗಿದೆ.

lokesh

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

1 hour ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

2 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

3 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

3 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

3 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

4 hours ago