BREAKING NEWS

2 ಸಾವಿರ ರೂ ನೋಟ್ ಹಿಂಪಡೆದ ಆರ್‌ಬಿಐ: ಸೆ.30ರವರೆಗೆ ಬ್ಯಾಂಕ್‌ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ

ನವದೆಹಲಿ: ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.

ಸೆಪ್ಟೆಂಬರ್ 3೦ರ ವರೆಗೆ 2,೦೦೦ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ.

ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿವೆ ಎಂದಿರುವ ಆರ್‌ಬಿಐ, 2೦೦೦ ರೂಪಾಯಿ ನೋಟ್‌ಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಿದೆ ಮತ್ತು ಒಂದು ಬಾರಿಗೆ 2೦ ಸಾವಿರ ರೂಪಾಯಿವರೆಗೆ ವಿನಿಮಯ ಮಾಡಿಕೊಳ್ಳಲು ಅಥವಾ ಜಮೆ ಮಾಡಲು ಅವಕಾಶ ನೀಡಿದೆ.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 5೦೦ ಮತ್ತು 1,೦೦೦ ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು.

ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕೆ (ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮೂಲಕ ನಗದು ರಹಿತ ಆರ್ಥಿಕತೆಯನ್ನು ಸೃಷ್ಟಿಸುವುದು ಯೋಜನೆಯ ಗುರಿಯಾಗಿತ್ತು.

ಹಳೆ ನೋಟುಗಳನ್ನು ಬದಲಿಸಲು ಆರ್‌ಬಿಐ ಹೊಸ 5೦೦ರ ನೋಟು ಮತ್ತು 2,೦೦೦ ರೂಪಾಯಿ ನೋಟುಗಳನ್ನು ಪರಿಚಯಿಸಿತು. ಪ್ರಸ್ತುತ, ಆರ್‌ಬಿಐ ರೂ 2, ರೂ 5, ರೂ 10, ರೂ 20, ರೂ 50, ರೂ 100, ರೂ 200 ಮತ್ತು ರೂ 500 ಮತ್ತು ನೋಟುಗಳನ್ನು ಪೂರೈಸುತ್ತಿದೆ. ಆದರೆ ಆರ್‌ಬಿಐ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ನಾಲ್ಕು ವರ್ಷಗಳ ಹಿಂದೆಯೇ ನಿಲ್ಲಿಸಿದೆ.

andolanait

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

3 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

3 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

3 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

3 hours ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

3 hours ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

3 hours ago