BREAKING NEWS

2 ಸಾವಿರ ರೂ ನೋಟ್ ಹಿಂಪಡೆದ ಆರ್‌ಬಿಐ: ಸೆ.30ರವರೆಗೆ ಬ್ಯಾಂಕ್‌ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ

ನವದೆಹಲಿ: ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.

ಸೆಪ್ಟೆಂಬರ್ 3೦ರ ವರೆಗೆ 2,೦೦೦ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ.

ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿವೆ ಎಂದಿರುವ ಆರ್‌ಬಿಐ, 2೦೦೦ ರೂಪಾಯಿ ನೋಟ್‌ಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಿದೆ ಮತ್ತು ಒಂದು ಬಾರಿಗೆ 2೦ ಸಾವಿರ ರೂಪಾಯಿವರೆಗೆ ವಿನಿಮಯ ಮಾಡಿಕೊಳ್ಳಲು ಅಥವಾ ಜಮೆ ಮಾಡಲು ಅವಕಾಶ ನೀಡಿದೆ.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 5೦೦ ಮತ್ತು 1,೦೦೦ ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು.

ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕೆ (ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮೂಲಕ ನಗದು ರಹಿತ ಆರ್ಥಿಕತೆಯನ್ನು ಸೃಷ್ಟಿಸುವುದು ಯೋಜನೆಯ ಗುರಿಯಾಗಿತ್ತು.

ಹಳೆ ನೋಟುಗಳನ್ನು ಬದಲಿಸಲು ಆರ್‌ಬಿಐ ಹೊಸ 5೦೦ರ ನೋಟು ಮತ್ತು 2,೦೦೦ ರೂಪಾಯಿ ನೋಟುಗಳನ್ನು ಪರಿಚಯಿಸಿತು. ಪ್ರಸ್ತುತ, ಆರ್‌ಬಿಐ ರೂ 2, ರೂ 5, ರೂ 10, ರೂ 20, ರೂ 50, ರೂ 100, ರೂ 200 ಮತ್ತು ರೂ 500 ಮತ್ತು ನೋಟುಗಳನ್ನು ಪೂರೈಸುತ್ತಿದೆ. ಆದರೆ ಆರ್‌ಬಿಐ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ನಾಲ್ಕು ವರ್ಷಗಳ ಹಿಂದೆಯೇ ನಿಲ್ಲಿಸಿದೆ.

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

9 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

13 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago