BREAKING NEWS

2 ಸಾವಿರ ರೂ ನೋಟ್ ಹಿಂಪಡೆದ ಆರ್‌ಬಿಐ: ಸೆ.30ರವರೆಗೆ ಬ್ಯಾಂಕ್‌ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ

ನವದೆಹಲಿ: ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.

ಸೆಪ್ಟೆಂಬರ್ 3೦ರ ವರೆಗೆ 2,೦೦೦ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ.

ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿವೆ ಎಂದಿರುವ ಆರ್‌ಬಿಐ, 2೦೦೦ ರೂಪಾಯಿ ನೋಟ್‌ಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಿದೆ ಮತ್ತು ಒಂದು ಬಾರಿಗೆ 2೦ ಸಾವಿರ ರೂಪಾಯಿವರೆಗೆ ವಿನಿಮಯ ಮಾಡಿಕೊಳ್ಳಲು ಅಥವಾ ಜಮೆ ಮಾಡಲು ಅವಕಾಶ ನೀಡಿದೆ.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 5೦೦ ಮತ್ತು 1,೦೦೦ ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು.

ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕೆ (ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮೂಲಕ ನಗದು ರಹಿತ ಆರ್ಥಿಕತೆಯನ್ನು ಸೃಷ್ಟಿಸುವುದು ಯೋಜನೆಯ ಗುರಿಯಾಗಿತ್ತು.

ಹಳೆ ನೋಟುಗಳನ್ನು ಬದಲಿಸಲು ಆರ್‌ಬಿಐ ಹೊಸ 5೦೦ರ ನೋಟು ಮತ್ತು 2,೦೦೦ ರೂಪಾಯಿ ನೋಟುಗಳನ್ನು ಪರಿಚಯಿಸಿತು. ಪ್ರಸ್ತುತ, ಆರ್‌ಬಿಐ ರೂ 2, ರೂ 5, ರೂ 10, ರೂ 20, ರೂ 50, ರೂ 100, ರೂ 200 ಮತ್ತು ರೂ 500 ಮತ್ತು ನೋಟುಗಳನ್ನು ಪೂರೈಸುತ್ತಿದೆ. ಆದರೆ ಆರ್‌ಬಿಐ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ನಾಲ್ಕು ವರ್ಷಗಳ ಹಿಂದೆಯೇ ನಿಲ್ಲಿಸಿದೆ.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago