BREAKING NEWS

2 ಸಾವಿರ ರೂ ನೋಟ್ ಹಿಂಪಡೆದ ಆರ್‌ಬಿಐ: ಸೆ.30ರವರೆಗೆ ಬ್ಯಾಂಕ್‌ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ

ನವದೆಹಲಿ: ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ.

ಸೆಪ್ಟೆಂಬರ್ 3೦ರ ವರೆಗೆ 2,೦೦೦ ಮುಖಬೆಲೆಯ ನೋಟುಗಳನ್ನು ಕಾನೂನುಬದ್ಧವಾಗಿ ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ.

ಇತರ ಮುಖಬೆಲೆಯ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿವೆ ಎಂದಿರುವ ಆರ್‌ಬಿಐ, 2೦೦೦ ರೂಪಾಯಿ ನೋಟ್‌ಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಿದೆ ಮತ್ತು ಒಂದು ಬಾರಿಗೆ 2೦ ಸಾವಿರ ರೂಪಾಯಿವರೆಗೆ ವಿನಿಮಯ ಮಾಡಿಕೊಳ್ಳಲು ಅಥವಾ ಜಮೆ ಮಾಡಲು ಅವಕಾಶ ನೀಡಿದೆ.
ನವೆಂಬರ್ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 5೦೦ ಮತ್ತು 1,೦೦೦ ರೂಪಾಯಿ ನೋಟ್ ಬ್ಯಾನ್ ಮಾಡುವುದಾಗಿ ಘೋಷಿಸಿದ್ದರು.

ನೋಟು ಅಮಾನ್ಯೀಕರಣ ನೀತಿಯನ್ನು ಜಾರಿಗೆ ತರುವ ಮುಖ್ಯ ಕಾರಣ ಕಪ್ಪುಹಣಕೆ (ಬ್ಲ್ಯಾಕ್‌ಮನಿ) ಕಡಿವಾಣ ಹಾಕುವುದು, ನಕಲಿ ನೋಟುಗಳನ್ನು ನಿರ್ಮೂಲನೆ ಮಾಡುವುದು ಮತ್ತು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮೂಲಕ ನಗದು ರಹಿತ ಆರ್ಥಿಕತೆಯನ್ನು ಸೃಷ್ಟಿಸುವುದು ಯೋಜನೆಯ ಗುರಿಯಾಗಿತ್ತು.

ಹಳೆ ನೋಟುಗಳನ್ನು ಬದಲಿಸಲು ಆರ್‌ಬಿಐ ಹೊಸ 5೦೦ರ ನೋಟು ಮತ್ತು 2,೦೦೦ ರೂಪಾಯಿ ನೋಟುಗಳನ್ನು ಪರಿಚಯಿಸಿತು. ಪ್ರಸ್ತುತ, ಆರ್‌ಬಿಐ ರೂ 2, ರೂ 5, ರೂ 10, ರೂ 20, ರೂ 50, ರೂ 100, ರೂ 200 ಮತ್ತು ರೂ 500 ಮತ್ತು ನೋಟುಗಳನ್ನು ಪೂರೈಸುತ್ತಿದೆ. ಆದರೆ ಆರ್‌ಬಿಐ 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ನಾಲ್ಕು ವರ್ಷಗಳ ಹಿಂದೆಯೇ ನಿಲ್ಲಿಸಿದೆ.

andolanait

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

8 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

8 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

8 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

9 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

10 hours ago