BREAKING NEWS

ನನ್ನ ವಿರುದ್ಧದ ಪ್ರಕರಣಗಳನ್ನು‌ ಕಾನೂನಾತ್ಮಕವಾಗಿ ಎದುರಿಸಲು ಸಿದ್ಧ: ಉದಯನಿಧಿ ಸ್ಟಾಲಿನ್

ಚೆನ್ನೈ: ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿಯಿಂದ ತೀವ್ರ ವಿರೋಧ ಎದುರಿಸುತ್ತಿರುವ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಬಿಜೆಪಿ ನಾಯಕರು ತಮ್ಮ ಹೇಳಿಕೆಗಳನ್ನು ತಿರುಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಈ ಸಂಬಂಧ ದಾಖಲಿಸುವ ಎಲ್ಲಾ ಪ್ರಕರಣಗಳನ್ನು ಕಾನೂನುಬದ್ಧವಾಗಿ ಎದುರಿಸಲು ಸಿದ್ಧ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಉದಯನಿಧಿ, “ಜಗತ್ತನ್ನೇ ತಿರುಗುವ ಪ್ರಧಾನಿ ಮೋದಿಗೆ ಮಣಿಪುರ ಹಿಂಸಾಚಾರದ ಬಗ್ಗೆ ಪ್ರಶ್ನೆಗಳನ್ನು ಎದುರಿಸಲು ಭಯ ಏಕೆ?” ಎಂದು ಪ್ರಶ್ನಿಸಿದ್ದಾರೆ.

“ಕಳೆದ 9 ವರ್ಷಗಳಿಂದ ನೀಡಿರುವ ನಿಮ್ಮ (ಬಿಜೆಪಿ) ಭರವಸೆಗಳೆಲ್ಲವೂ ಪೊಳ್ಳು ಭರವಸೆಗಳಾಗಿವೆ, ನಮ್ಮ ಕಲ್ಯಾಣಕ್ಕಾಗಿ ನೀವು ಏನು ಮಾಡಿದ್ದೀರಿ ಎಂಬುದು ಫ್ಯಾಸಿಸ್ಟ್ ಬಿಜೆಪಿ ಸರ್ಕಾರದ ವಿರುದ್ಧ ಇಡೀ ದೇಶವು ಒಗ್ಗಟ್ಟಿನಿಂದ ಎತ್ತುತ್ತಿರುವ ಪ್ರಶ್ನೆಯಾಗಿದೆ. ಬಿಜೆಪಿ ನಾಯಕರು ನನ್ನ ಭಾಷಣವನ್ನು ‘ಜನಾಂಗೀಯ ಹತ್ಯೆಗೆ ಪ್ರಚೋದನೆ’ ಎಂದು ತಿರುಚಿದ್ದಾರೆ. ಅದನ್ನು ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಅಸ್ತ್ರವೆಂದು ಪರಿಗಣಿಸಿದ್ದಾರೆ,” ಎಂದು ಉದಯನಿಧಿ ಹೇಳಿದ್ದಾರೆ.

ಆಶ್ಚರ್ಯದ ಸಂಗತಿಯೆಂದರೆ ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಕೂಡಾ ʼನಕಲಿ ಸುದ್ದಿʼಯನ್ನು ಆಧರಿಸಿ ನನ್ನ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ ಎಂದು ಉದಯನಿಧಿ ಹೇಳಿದರು.

“ಗೌರವಾನ್ವಿತ ಸ್ಥಾನಗಳನ್ನು ಹೊಂದಿರುವ ಅವರು ನನ್ನನ್ನು ನಿಂದಿಸುತ್ತಿರುವುದಕ್ಕಾಗಿ ನಾನೇ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಿಸಬೇಕು” ಎಂದು ಉದಯನಿಧಿ ಹೇಳಿದರು.

ನಾನು ಡಿಎಂಕೆಯ ಸಂಸ್ಥಾಪಕ ದಿವಂಗತ ಸಿಎನ್ ಅಣ್ಣಾದೊರೈ ಅವರ ದ್ರಾವಿಡ ಧೀಮಂತ ರಾಜಕೀಯ ವಾರಸುದಾರರಲ್ಲಿ ಒಬ್ಬ. ನಾವು ಯಾವುದೇ ಧರ್ಮದ ಶತ್ರುಗಳಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದ್ದಾರೆ.

“ಒಂದು ಧರ್ಮವು ಜನರನ್ನು ಸಮಾನತೆಯ ಕಡೆಗೆ ಕೊಂಡೊಯ್ಯುತ್ತದೆ ಮತ್ತು ಭ್ರಾತೃತ್ವವನ್ನು ಕಲಿಸುತ್ತದೆ ಎಂದರೆ ಆಗ ನಾನು ಆಧ್ಯಾತ್ಮಿಕವಾದಿಯಾಗುತ್ತೇನೆ, ಅದೇ ಧರ್ಮವು ಜಾತಿಗಳ ಹೆಸರಿನಲ್ಲಿ ಜನರನ್ನು ವಿಭಜಿಸಿದರೆ, ಅಸ್ಪೃಶ್ಯತೆ ಮತ್ತು ಗುಲಾಮಗಿರಿಯನ್ನು ಕಲಿಸಿದರೆ ಅದನ್ನು ವಿರೋಧಿಸುವ ಮೊದಲ ವ್ಯಕ್ತಿ ನಾನಾಗಿರುತ್ತೇನೆ ” ಎಂಬ ಅಣ್ಣಾದೊರೈ ಹೇಳಿಕೆಯನ್ನು ಉದಯನಿಧಿ ಉಲ್ಲೇಖಿಸಿದ್ದಾರೆ.

ಎಲ್ಲಾ ಜೀವಗಳ ಹುಟ್ಟು ಸಮಾನ ಎಂದು ಕಲಿಸುವ ಎಲ್ಲಾ ಧರ್ಮಗಳನ್ನು ಡಿಎಂಕೆ ಗೌರವಿಸುತ್ತದೆ ಎಂದು ಅವರು ಹೇಳಿದರು.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

10 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

10 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

10 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

10 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

12 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

13 hours ago