ನವದೆಹಲಿ : ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್ಪಿಜಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ.
ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್ಪಿಜಿ ಸಿಲಿಂಡರ್ ದರವನ್ನು ಏರಿಸಿದ್ದವು. ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…