ನವದೆಹಲಿ : ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್ಪಿಜಿ ಸಿಲಿಂಡರ್ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಮಂಗಳವಾರ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ತೈಲ ಕಂಪನಿಗಳಿಗೆ ನೇರವಾಗಿ ಪಾವತಿಯಾಗುವ ಕಾರಣ ಖರೀದಿಸುವಾಗಲೇ 200 ರೂ. ಕಡಿತಗೊಳ್ಳಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ 14 ಕೆಜಿ ಎಲ್ಪಿಜಿಗೆ 1100 ರೂ. ಇದೆ. ಇನ್ನು ಮುಂದೆ 900 ರೂ.ಗೆ ಗ್ಯಾಸ್ ಸಿಲಿಂಡರ್ ಸಿಗಲಿದೆ.
ಕಚ್ಚಾ ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ತೈಲ ಕಂಪನಿಗಳು ಮೇ, ಜುಲೈನಲ್ಲಿ ಎಲ್ಪಿಜಿ ಸಿಲಿಂಡರ್ ದರವನ್ನು ಏರಿಸಿದ್ದವು. ರಾಜಸ್ಥಾನ, ಛತ್ತೀಸ್ಗಢ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂನಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಕೇಂದ್ರದಿಂದ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…