ಬೆಂಗಳೂರು : ನಾನೆಲ್ಲೂ ಹೋಗಿಲ್ಲ ಇಲ್ಲೇ ಇದ್ದೀನಿ ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಎಂದು ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನದ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ನಾನು ಎಲ್ಲೂ ಹೋಗಿಲ್ಲ ಇಲ್ಲೇ ಇದ್ದೇನೆ. ನಾವು ಕಾನೂನಿನ ಪ್ರಕಾರ ಹೋರಾಟ ನಡೆಸುತ್ತೇವೆ ಎಂದರು.
ಇದೇನು ಮೊದಲಲ್ಲ, ಕಳೆದ ೪೦ ವರ್ಷದಿಂದ ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಪಕ್ಷ ಸಿಒಡಿ, ಲೋಕಾಯುಕ್ತ ಸೇರಿದಂತೆ ಅನೇಕ ತನಿಖೆಗಳನ್ನು ಎದುರಿಸಿಕೊಂಡು ಬಂದಿದ್ದೇವೆ ಎಂದರು.
ಕಾಂಗ್ರೆಸ್ ಪಕ್ಷದ ಆರೋಪಗಳ ಬಗ್ಗೆ ಮಾತನಾಡಿದ ಅವರು, ಸರ್ಕಾರ ಅವರದ್ದೇ ಇದೆ, ಎಸ್ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ಅವರು ಏನು ಬೇಕಾದರು ಮಾಡಲಿ. ಕಾನೂನು ರೀತಿ ಏನು ಬೇಕಾದರು ಕ್ರಮ ಕೈಗೊಳ್ಳಲಿ ಎಂದರು.
ಎಸ್ಐಟಿ ತನಿಖೆಯೆ ಯಾವುದೇ ರೀತಿಯ ಮುಜುಗರವಾಗಬಾರದು ಎಂಬ ಉದ್ದೇಶದಿಂದ ನಾನು ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು.
ತನಿಖೆಗೆ ಕರೆದಾಗ ಬರುತ್ತಾನೆ: ಎಫ್ಐಆರ್ ಮಾಡುತ್ತಾರೆ ಅಂತಾ ಪ್ರಜ್ವಲ್ಗೆನಾದರು ಗೊತ್ತಿತ್ತಾ? ಕೆಲಸದ ನಿಮಿತ್ತ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾನೆ. ತನಿಖೆಗೆ ಕರೆದಾಗ ಬರುತ್ತಾನೆ ಎಂದು ಹೆಚ್.ಡಿ.ರೇವಣ್ಣ ತಿಳಿಸಿದರು.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…