ಬೆಂಗಳೂರು : ನಾನೆಲ್ಲೂ ಹೋಗಿಲ್ಲ ಇಲ್ಲೇ ಇದ್ದೀನಿ ಕಾನೂನು ಮೂಲಕ ಹೋರಾಟ ಮಾಡುತ್ತೇವೆ ಎಂದು ಹೆಚ್.ಡಿ.ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಹಾಸನದ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮೇಲೆ ಕೇಳಿ ಬಂದಿರುವ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ನಾನು ಎಲ್ಲೂ ಹೋಗಿಲ್ಲ ಇಲ್ಲೇ ಇದ್ದೇನೆ. ನಾವು ಕಾನೂನಿನ ಪ್ರಕಾರ ಹೋರಾಟ ನಡೆಸುತ್ತೇವೆ ಎಂದರು.
ಇದೇನು ಮೊದಲಲ್ಲ, ಕಳೆದ ೪೦ ವರ್ಷದಿಂದ ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಪಕ್ಷ ಸಿಒಡಿ, ಲೋಕಾಯುಕ್ತ ಸೇರಿದಂತೆ ಅನೇಕ ತನಿಖೆಗಳನ್ನು ಎದುರಿಸಿಕೊಂಡು ಬಂದಿದ್ದೇವೆ ಎಂದರು.
ಕಾಂಗ್ರೆಸ್ ಪಕ್ಷದ ಆರೋಪಗಳ ಬಗ್ಗೆ ಮಾತನಾಡಿದ ಅವರು, ಸರ್ಕಾರ ಅವರದ್ದೇ ಇದೆ, ಎಸ್ಐಟಿ ತನಿಖೆಗೆ ಆದೇಶ ಮಾಡಿದ್ದಾರೆ. ಅವರು ಏನು ಬೇಕಾದರು ಮಾಡಲಿ. ಕಾನೂನು ರೀತಿ ಏನು ಬೇಕಾದರು ಕ್ರಮ ಕೈಗೊಳ್ಳಲಿ ಎಂದರು.
ಎಸ್ಐಟಿ ತನಿಖೆಯೆ ಯಾವುದೇ ರೀತಿಯ ಮುಜುಗರವಾಗಬಾರದು ಎಂಬ ಉದ್ದೇಶದಿಂದ ನಾನು ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು.
ತನಿಖೆಗೆ ಕರೆದಾಗ ಬರುತ್ತಾನೆ: ಎಫ್ಐಆರ್ ಮಾಡುತ್ತಾರೆ ಅಂತಾ ಪ್ರಜ್ವಲ್ಗೆನಾದರು ಗೊತ್ತಿತ್ತಾ? ಕೆಲಸದ ನಿಮಿತ್ತ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾನೆ. ತನಿಖೆಗೆ ಕರೆದಾಗ ಬರುತ್ತಾನೆ ಎಂದು ಹೆಚ್.ಡಿ.ರೇವಣ್ಣ ತಿಳಿಸಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…