BREAKING NEWS

ಪರಿಷತ್‌ನಲ್ಲೂ ಪಾಸಾದ ನೋಂದಣಿ-ಭೂ ಕಂದಾಯ ತಿದ್ದುಪಡಿ ವಿಧೇಯಕ

ಬೆಂಗಳೂರು : ಕಂದಾಯ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೇವಲ ಎರಡೇ ತಿಂಗಳಲ್ಲಿ ಭೂ ಪರಿವರ್ತನೆ ಹಾಗೂ ನೋಂದಣಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲ ರೀತಿಯ ಭ್ರಷ್ಟಾಚಾರವನ್ನೂ ಕೊನೆಗೊಳಿಸಿ, ಆಡಳಿತ ಸುಧಾರಣೆ ನಿಟ್ಟಿನಲ್ಲಿ ಸಚಿವ ಕೃಷ್ಣಭೈರೇಗೌಡ ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ. ಅವರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಭೂ ಕಂದಾಯತಿದ್ದುಪಡಿ) ವಿಧೇಯಕ ಹಾಗೂ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲೂ ಮಂಡಿಸಿ ಚರ್ಚಿಸಲಾಯಿತು. ಈ ವೇಳೆ ಮಾತನಾಡಿದ ಮರಿತಿಬ್ಬೇಗೌಡ, “ನೋಂದಣಿ ಅಧಿಕಾರಿ ಒಳ್ಳೆಯ ವ್ಯಕ್ತಿಯೇ ಆಗಿದ್ದರೂ, ಜನ ಅನುಮಾನದಿಂದಲೇ ನೋಡುವಂತಾಗಿದೆ. ಇದಕ್ಕೆ ಕಾರಣ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ. ಈ ಭ್ರಷ್ಟಾಚಾರವನ್ನು ತಡೆದು ಜನರಿಗೆ ಸುಗಮ ಮತ್ತು ಸರಳ ಸೇವೆಯನ್ನು ಒದಗಿಸುವ ಸಲುವಾಗಿ ಸಚಿವ ಕೃಷ್ಣಭೈರೇಗೌಡ ತೆಗೆದುಕೊಂಡಿರುವ ಕ್ರಮ ಮತ್ತು ಸರ್ಕಾರದ ನಡೆ ನಿಜಕ್ಕೂ ಶ್ಲಾಘನೀಯ” ಎಂದು ಪ್ರಶಂಶಿಸಿದ್ದಾರೆ

“ಯಾರದ್ದೋ ಆಸ್ತಿಯನ್ನು ಮತ್ಯಾರೋ ತಮ್ಮ ಹೆಸರಿಗೆ ನೋಂದಣಿ ಮಾಡಿಕೊಳ್ಳುವ, ಇನ್ಯಾರಿಗೋ ಮಾರಾಟ ಮಾಡಿಕೊಳ್ಳುವ ದೊಡ್ಡ ಮೋಸದ ಜಾಲ ಇಂದು ರಾಜ್ಯಾದ್ಯಂತ ಸಕ್ರೀಯವಾಗಿದೆ. ಬೆಂಗಳೂರಿನಂತಹ ನಗರದಲ್ಲಿ ನೀವು ಒಂದು ವರ್ಷ ವಿದೇಶಕ್ಕೆ ಹೋಗಿ ಹಿಂತಿರುಗಿದರೆ, ವಾಪಾಸ್ ಬರುವ ವೇಳೆಗೆ ನಿಮ್ಮ ಭೂಮಿ ಮತ್ತೊಬ್ಬರಿಗೆ ನೋಂದಣಿಯಾಗಿರುತ್ತದೆ. ಈ ಮೋಸದ ಜಾಲದ ಹಿಂದೆ ಹಲವು ಅಧಿಕಾರಿಗಳ ಕೈವಾಡವೂ ಇದೆ.

ಆದರೆ, ಈ ವಂಚನೆಗೆ ಒಳಗಾದ ಆಸ್ತಿ ಮಾಲೀಕರು ತನ್ನ ಜೀವಿತಾವಧಿಯ ಕೊನೆವರೆಗೂ ಸಿವಿಲ್ ನ್ಯಾಯಾಲಯಗಳ ಮೆಟ್ಟಿಲು ಹತ್ತಿಳಿದರೂ ತ್ವರಿತ ನ್ಯಾಯದ ಆಶ್ವಾಸನೆ ನೀಡಲು ಸಾಧ್ಯವಿಲ್ಲದಂತಾಗಿದೆ. ಅಂತಹ ಜನರಿಗೆ ತ್ವರಿತ ನ್ಯಾಯ ಒದಗಿಸಲು ಮತ್ತು ಭ್ರಷ್ಟ ಅಧಿಕಾರಿಗಳನ್ನು ಕಾನೂನು ಅಡಿ ಶಿಕ್ಷಿಸಲು, ಭ್ರಷ್ಟಾಚಾರವನ್ನು ನಿಯಂತ್ರಿಸಲು ಈ ತಿದ್ದುಪಡಿ ವಿಧೇಯಕ ಉಪಯೋಗವಾಗುತ್ತದೆ” ಎಂದು ಮರಿತಿಬ್ಬೇಗೌಡ ಅಭಿಮತ ವ್ಯಕ್ತಪಡಿಸಿದರು. ಅಲ್ಲದೆ, ಕಂದಾಯ ಇಲಾಖೆ ಆಡಳಿತದಲ್ಲಿ ಮತ್ತಷ್ಟು ಸುಧಾರಣೆ ಆಗಬೇಕು ಎಂದು ಸಲಹೆ ನೀಡಿದರು.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

7 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

11 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

12 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

12 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

17 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

17 hours ago