ಬೆಂಗಳೂರು : ಕಂದಾಯ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೇವಲ ಎರಡೇ ತಿಂಗಳಲ್ಲಿ ಭೂ ಪರಿವರ್ತನೆ ಹಾಗೂ ನೋಂದಣಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲ ರೀತಿಯ ಭ್ರಷ್ಟಾಚಾರವನ್ನೂ ಕೊನೆಗೊಳಿಸಿ, ಆಡಳಿತ ಸುಧಾರಣೆ ನಿಟ್ಟಿನಲ್ಲಿ ಸಚಿವ ಕೃಷ್ಣಭೈರೇಗೌಡ ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ. ಅವರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಭೂ ಕಂದಾಯತಿದ್ದುಪಡಿ) ವಿಧೇಯಕ ಹಾಗೂ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲೂ ಮಂಡಿಸಿ ಚರ್ಚಿಸಲಾಯಿತು. ಈ ವೇಳೆ ಮಾತನಾಡಿದ ಮರಿತಿಬ್ಬೇಗೌಡ, “ನೋಂದಣಿ ಅಧಿಕಾರಿ ಒಳ್ಳೆಯ ವ್ಯಕ್ತಿಯೇ ಆಗಿದ್ದರೂ, ಜನ ಅನುಮಾನದಿಂದಲೇ ನೋಡುವಂತಾಗಿದೆ. ಇದಕ್ಕೆ ಕಾರಣ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ. ಈ ಭ್ರಷ್ಟಾಚಾರವನ್ನು ತಡೆದು ಜನರಿಗೆ ಸುಗಮ ಮತ್ತು ಸರಳ ಸೇವೆಯನ್ನು ಒದಗಿಸುವ ಸಲುವಾಗಿ ಸಚಿವ ಕೃಷ್ಣಭೈರೇಗೌಡ ತೆಗೆದುಕೊಂಡಿರುವ ಕ್ರಮ ಮತ್ತು ಸರ್ಕಾರದ ನಡೆ ನಿಜಕ್ಕೂ ಶ್ಲಾಘನೀಯ” ಎಂದು ಪ್ರಶಂಶಿಸಿದ್ದಾರೆ
“ಯಾರದ್ದೋ ಆಸ್ತಿಯನ್ನು ಮತ್ಯಾರೋ ತಮ್ಮ ಹೆಸರಿಗೆ ನೋಂದಣಿ ಮಾಡಿಕೊಳ್ಳುವ, ಇನ್ಯಾರಿಗೋ ಮಾರಾಟ ಮಾಡಿಕೊಳ್ಳುವ ದೊಡ್ಡ ಮೋಸದ ಜಾಲ ಇಂದು ರಾಜ್ಯಾದ್ಯಂತ ಸಕ್ರೀಯವಾಗಿದೆ. ಬೆಂಗಳೂರಿನಂತಹ ನಗರದಲ್ಲಿ ನೀವು ಒಂದು ವರ್ಷ ವಿದೇಶಕ್ಕೆ ಹೋಗಿ ಹಿಂತಿರುಗಿದರೆ, ವಾಪಾಸ್ ಬರುವ ವೇಳೆಗೆ ನಿಮ್ಮ ಭೂಮಿ ಮತ್ತೊಬ್ಬರಿಗೆ ನೋಂದಣಿಯಾಗಿರುತ್ತದೆ. ಈ ಮೋಸದ ಜಾಲದ ಹಿಂದೆ ಹಲವು ಅಧಿಕಾರಿಗಳ ಕೈವಾಡವೂ ಇದೆ.
ಆದರೆ, ಈ ವಂಚನೆಗೆ ಒಳಗಾದ ಆಸ್ತಿ ಮಾಲೀಕರು ತನ್ನ ಜೀವಿತಾವಧಿಯ ಕೊನೆವರೆಗೂ ಸಿವಿಲ್ ನ್ಯಾಯಾಲಯಗಳ ಮೆಟ್ಟಿಲು ಹತ್ತಿಳಿದರೂ ತ್ವರಿತ ನ್ಯಾಯದ ಆಶ್ವಾಸನೆ ನೀಡಲು ಸಾಧ್ಯವಿಲ್ಲದಂತಾಗಿದೆ. ಅಂತಹ ಜನರಿಗೆ ತ್ವರಿತ ನ್ಯಾಯ ಒದಗಿಸಲು ಮತ್ತು ಭ್ರಷ್ಟ ಅಧಿಕಾರಿಗಳನ್ನು ಕಾನೂನು ಅಡಿ ಶಿಕ್ಷಿಸಲು, ಭ್ರಷ್ಟಾಚಾರವನ್ನು ನಿಯಂತ್ರಿಸಲು ಈ ತಿದ್ದುಪಡಿ ವಿಧೇಯಕ ಉಪಯೋಗವಾಗುತ್ತದೆ” ಎಂದು ಮರಿತಿಬ್ಬೇಗೌಡ ಅಭಿಮತ ವ್ಯಕ್ತಪಡಿಸಿದರು. ಅಲ್ಲದೆ, ಕಂದಾಯ ಇಲಾಖೆ ಆಡಳಿತದಲ್ಲಿ ಮತ್ತಷ್ಟು ಸುಧಾರಣೆ ಆಗಬೇಕು ಎಂದು ಸಲಹೆ ನೀಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…