ಬೆಂಗಳೂರು : ಕಂದಾಯ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಕೇವಲ ಎರಡೇ ತಿಂಗಳಲ್ಲಿ ಭೂ ಪರಿವರ್ತನೆ ಹಾಗೂ ನೋಂದಣಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಎಲ್ಲ ರೀತಿಯ ಭ್ರಷ್ಟಾಚಾರವನ್ನೂ ಕೊನೆಗೊಳಿಸಿ, ಆಡಳಿತ ಸುಧಾರಣೆ ನಿಟ್ಟಿನಲ್ಲಿ ಸಚಿವ ಕೃಷ್ಣಭೈರೇಗೌಡ ಸೂಕ್ತ ಕ್ರಮ ತೆಗೆದುಕೊಂಡಿದ್ದಾರೆ. ಅವರ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಭೂ ಕಂದಾಯತಿದ್ದುಪಡಿ) ವಿಧೇಯಕ ಹಾಗೂ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲೂ ಮಂಡಿಸಿ ಚರ್ಚಿಸಲಾಯಿತು. ಈ ವೇಳೆ ಮಾತನಾಡಿದ ಮರಿತಿಬ್ಬೇಗೌಡ, “ನೋಂದಣಿ ಅಧಿಕಾರಿ ಒಳ್ಳೆಯ ವ್ಯಕ್ತಿಯೇ ಆಗಿದ್ದರೂ, ಜನ ಅನುಮಾನದಿಂದಲೇ ನೋಡುವಂತಾಗಿದೆ. ಇದಕ್ಕೆ ಕಾರಣ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರ. ಈ ಭ್ರಷ್ಟಾಚಾರವನ್ನು ತಡೆದು ಜನರಿಗೆ ಸುಗಮ ಮತ್ತು ಸರಳ ಸೇವೆಯನ್ನು ಒದಗಿಸುವ ಸಲುವಾಗಿ ಸಚಿವ ಕೃಷ್ಣಭೈರೇಗೌಡ ತೆಗೆದುಕೊಂಡಿರುವ ಕ್ರಮ ಮತ್ತು ಸರ್ಕಾರದ ನಡೆ ನಿಜಕ್ಕೂ ಶ್ಲಾಘನೀಯ” ಎಂದು ಪ್ರಶಂಶಿಸಿದ್ದಾರೆ
“ಯಾರದ್ದೋ ಆಸ್ತಿಯನ್ನು ಮತ್ಯಾರೋ ತಮ್ಮ ಹೆಸರಿಗೆ ನೋಂದಣಿ ಮಾಡಿಕೊಳ್ಳುವ, ಇನ್ಯಾರಿಗೋ ಮಾರಾಟ ಮಾಡಿಕೊಳ್ಳುವ ದೊಡ್ಡ ಮೋಸದ ಜಾಲ ಇಂದು ರಾಜ್ಯಾದ್ಯಂತ ಸಕ್ರೀಯವಾಗಿದೆ. ಬೆಂಗಳೂರಿನಂತಹ ನಗರದಲ್ಲಿ ನೀವು ಒಂದು ವರ್ಷ ವಿದೇಶಕ್ಕೆ ಹೋಗಿ ಹಿಂತಿರುಗಿದರೆ, ವಾಪಾಸ್ ಬರುವ ವೇಳೆಗೆ ನಿಮ್ಮ ಭೂಮಿ ಮತ್ತೊಬ್ಬರಿಗೆ ನೋಂದಣಿಯಾಗಿರುತ್ತದೆ. ಈ ಮೋಸದ ಜಾಲದ ಹಿಂದೆ ಹಲವು ಅಧಿಕಾರಿಗಳ ಕೈವಾಡವೂ ಇದೆ.
ಆದರೆ, ಈ ವಂಚನೆಗೆ ಒಳಗಾದ ಆಸ್ತಿ ಮಾಲೀಕರು ತನ್ನ ಜೀವಿತಾವಧಿಯ ಕೊನೆವರೆಗೂ ಸಿವಿಲ್ ನ್ಯಾಯಾಲಯಗಳ ಮೆಟ್ಟಿಲು ಹತ್ತಿಳಿದರೂ ತ್ವರಿತ ನ್ಯಾಯದ ಆಶ್ವಾಸನೆ ನೀಡಲು ಸಾಧ್ಯವಿಲ್ಲದಂತಾಗಿದೆ. ಅಂತಹ ಜನರಿಗೆ ತ್ವರಿತ ನ್ಯಾಯ ಒದಗಿಸಲು ಮತ್ತು ಭ್ರಷ್ಟ ಅಧಿಕಾರಿಗಳನ್ನು ಕಾನೂನು ಅಡಿ ಶಿಕ್ಷಿಸಲು, ಭ್ರಷ್ಟಾಚಾರವನ್ನು ನಿಯಂತ್ರಿಸಲು ಈ ತಿದ್ದುಪಡಿ ವಿಧೇಯಕ ಉಪಯೋಗವಾಗುತ್ತದೆ” ಎಂದು ಮರಿತಿಬ್ಬೇಗೌಡ ಅಭಿಮತ ವ್ಯಕ್ತಪಡಿಸಿದರು. ಅಲ್ಲದೆ, ಕಂದಾಯ ಇಲಾಖೆ ಆಡಳಿತದಲ್ಲಿ ಮತ್ತಷ್ಟು ಸುಧಾರಣೆ ಆಗಬೇಕು ಎಂದು ಸಲಹೆ ನೀಡಿದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…