BREAKING NEWS

ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ : ಹೆಚ್‌.ಡಿ.ಕೆ ಗೆ ಮಾಜಿ ಶಾಸಕ ಯತೀಂದ್ರ ಸವಾಲ್

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ವಿಷಯದಲ್ಲಿ ಯಾವುದೇ ದಂಧೆ ನಡೆಯುತ್ತಿಲ್ಲ. ಆಧಾರ ರಹಿತ ಆರೋಪ ಮಾಡಬಾರದು, ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ ಎಂದು ಮಾಜಿ ಶಾಸಕ ಯತೀಂದ್ರ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿದೆ. ಈ ಮೊದಲು ಬಿಜೆಪಿಯವರು ಕೊಟ್ಟ ಯಾವ ಭರವಸೆಗಳನ್ನೂ ಈಡೇರಿಸಿರಲಿಲ್ಲ. ಕಾಂಗ್ರೆಸ್‍ನವರು ಅದೇ ರೀತಿ ಮಾಡುತ್ತಾರೆ ಎಂದುಕೊಂಡಿದ್ದರು ಎಂದು ಹೇಳಿದರು.

ಆದರೆ ನಮ್ಮ ಸರ್ಕಾರ ಹಂತಹಂತವಾಗಿ ಒಂದೊಂದೆ ಗ್ಯಾರಂಟಿಗಳನ್ನು ಈಡೇರಿಸುತ್ತಿದೆ. ಇದರಿಂದ ಹತಾಶರಾಗಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆಂದು ಅಸಾಮಾಧನ ವ್ಯಕ್ತಪಡಿಸಿದರು.ಈ ಹಿಂದೆಯೂ ಕೂಡ ಕುಮಾರಸ್ವಾಮಿಯವರು ಸಾಕಷ್ಟು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಡಿ.ಕೆ.ರವಿ ಅವರ ಅಸಹಜ ಸಾವಾದಾಗ ಮುಖ್ಯಮಂತ್ರಿಯಾಗಿದ್ದ ತಮ್ಮ ತಂದೆ ಸಿದ್ದರಾಮಯ್ಯ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ನೋಡಲು ಹೋಗಿದ್ದರು. ಆಗ ಫೋರೆನ್ಸಿಕ್ ವರದಿ ತಿರುಚಲು ಹೋಗಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು ಎಂದು ಹೇಳಿದರು.

ವರ್ಗಾವಣೆ ದಂಧೆ ನಡೆಯುತ್ತಿದೆ. ಯತೀಂದ್ರ ಅವರಿಗೆ ಸೇರಿದ ಆಡಿಯೋ ಸಾಕ್ಷಿ ಇದೆ ಎಂಬೆಲ್ಲಾ ವದಂತಿಗಳ ಬಗ್ಗೆ ಪ್ರಶ್ನಿಸಿದಾಗ ಅಸಮಾಧನ ವ್ಯಕ್ತಪಡಿಸಿದ ಯತೀಂದ್ರ ಅವರು ಯಾರ ಆಡಿಯೋ ಧೈರ್ಯ ಇದ್ದರೆ ಬಿಡುಗಡೆ ಮಾಡಲು ಹೇಳಿ, ನನ್ನದಂತೂ ಆಡಿಯೋ ಇಲ್ಲ. ಯಾವ ವರ್ಗಾವಣೆ ದಂಧೆಯೂ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

5 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

6 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

7 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

7 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

8 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

8 hours ago