BREAKING NEWS

ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ : ಹೆಚ್‌.ಡಿ.ಕೆ ಗೆ ಮಾಜಿ ಶಾಸಕ ಯತೀಂದ್ರ ಸವಾಲ್

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ವಿಷಯದಲ್ಲಿ ಯಾವುದೇ ದಂಧೆ ನಡೆಯುತ್ತಿಲ್ಲ. ಆಧಾರ ರಹಿತ ಆರೋಪ ಮಾಡಬಾರದು, ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ ಎಂದು ಮಾಜಿ ಶಾಸಕ ಯತೀಂದ್ರ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿದೆ. ಈ ಮೊದಲು ಬಿಜೆಪಿಯವರು ಕೊಟ್ಟ ಯಾವ ಭರವಸೆಗಳನ್ನೂ ಈಡೇರಿಸಿರಲಿಲ್ಲ. ಕಾಂಗ್ರೆಸ್‍ನವರು ಅದೇ ರೀತಿ ಮಾಡುತ್ತಾರೆ ಎಂದುಕೊಂಡಿದ್ದರು ಎಂದು ಹೇಳಿದರು.

ಆದರೆ ನಮ್ಮ ಸರ್ಕಾರ ಹಂತಹಂತವಾಗಿ ಒಂದೊಂದೆ ಗ್ಯಾರಂಟಿಗಳನ್ನು ಈಡೇರಿಸುತ್ತಿದೆ. ಇದರಿಂದ ಹತಾಶರಾಗಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆಂದು ಅಸಾಮಾಧನ ವ್ಯಕ್ತಪಡಿಸಿದರು.ಈ ಹಿಂದೆಯೂ ಕೂಡ ಕುಮಾರಸ್ವಾಮಿಯವರು ಸಾಕಷ್ಟು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಡಿ.ಕೆ.ರವಿ ಅವರ ಅಸಹಜ ಸಾವಾದಾಗ ಮುಖ್ಯಮಂತ್ರಿಯಾಗಿದ್ದ ತಮ್ಮ ತಂದೆ ಸಿದ್ದರಾಮಯ್ಯ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ನೋಡಲು ಹೋಗಿದ್ದರು. ಆಗ ಫೋರೆನ್ಸಿಕ್ ವರದಿ ತಿರುಚಲು ಹೋಗಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದರು ಎಂದು ಹೇಳಿದರು.

ವರ್ಗಾವಣೆ ದಂಧೆ ನಡೆಯುತ್ತಿದೆ. ಯತೀಂದ್ರ ಅವರಿಗೆ ಸೇರಿದ ಆಡಿಯೋ ಸಾಕ್ಷಿ ಇದೆ ಎಂಬೆಲ್ಲಾ ವದಂತಿಗಳ ಬಗ್ಗೆ ಪ್ರಶ್ನಿಸಿದಾಗ ಅಸಮಾಧನ ವ್ಯಕ್ತಪಡಿಸಿದ ಯತೀಂದ್ರ ಅವರು ಯಾರ ಆಡಿಯೋ ಧೈರ್ಯ ಇದ್ದರೆ ಬಿಡುಗಡೆ ಮಾಡಲು ಹೇಳಿ, ನನ್ನದಂತೂ ಆಡಿಯೋ ಇಲ್ಲ. ಯಾವ ವರ್ಗಾವಣೆ ದಂಧೆಯೂ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

lokesh

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

6 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

11 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

11 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

12 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

13 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

13 hours ago