BREAKING NEWS

ನೆಹರೂ ಮ್ಯೂಸಿಯಂಗೆ ಮರುನಾಮಕರಣ: ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ನವದೆಹಲಿ : ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು (ಎನ್ಎಂಎಂಎಲ್) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಸೊಸೈಟಿ ಎಂದು ಮರುನಾಮಕರಣ ಮಾಡಲು ಕೇಂದ್ರವು ಇತ್ತೀಚೆಗೆ ನಿರ್ಧರಿಸಿದೆ. ಇದರ ಬೆನ್ನಲ್ಲೇ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಎಂದು ಮರುನಾಮಕರಣ ಮಾಡುವ ಕೇಂದ್ರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.

ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಹಿರಿಯ ನಾಯಕ ಹಾಗೂ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಟ್ವೀಟ್ ಮಾಡಿ, “ಕ್ಷುಲ್ಲಕತೆ ಮತ್ತು ಸೇಡಿನ ಮತ್ತೊಂದು ಹೆಸರು ಮೋದಿ. 59 ವರ್ಷಗಳಿಂದ ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (ಎನ್ಎಂಎಂಎಲ್) ಜಾಗತಿಕ ಬೌದ್ಧಿಕ ಹೆಗ್ಗುರುತು ಮತ್ತು ಪುಸ್ತಕಗಳು ಮತ್ತು ದಾಖಲೆಗಳ ನಿಧಿಯಾಗಿದೆ. ಇನ್ನು ಮುಂದೆ ಪ್ರಧಾನ ಮಂತ್ರಿಗಳ ಮ್ಯೂಸಿಯಂ ಮತ್ತು ಸೊಸೈಟಿ ಎಂದು ಕರೆಯಲಾಗುವುದು, ಭಾರತೀಯ ರಾಷ್ಟ್ರ-ರಾಜ್ಯದ ಶಿಲ್ಪಕಾರರ ಹೆಸರು ಮತ್ತು ಪರಂಪರೆಯನ್ನು ವಿರೂಪಗೊಳಿಸಲು, ಅವಹೇಳನ ಮಾಡಲು ಮತ್ತು ನಾಶಮಾಡಲು ಮೋದಿ ಏನೆಲ್ಲಾ ಮಾಡುವುದಿಲ್ಲ ಹೇಳಿ. ತನ್ನ ಅಭದ್ರತೆಯಿಂದ ತುಂಬಿರುವ ಸಣ್ಣ,ಮನುಷ್ಯ ಸ್ವಯಂ -ಘೋಷಿತ ವಿಶ್ವಗುರು’’ ಎಂದು ಟ್ವಿಟಿಸಿದ್ದಾರೆ.congress

ಎಎನ್ಐ ಜೊತೆ ಮಾತನಾಡಿದ ಕಾರ್ಯಕಾರಿ ಮಂಡಳಿ, ಎನ್ಎಂಎಂಎಲ್ಎ ಉಪಾಧ್ಯಕ್ಷ ಸೂರ್ಯ ಪ್ರಕಾಶ್, “ಈ ಸೊಸೈಟಿಯ ಸಾಮಾನ್ಯ ಸಭೆಯ ನಿರ್ಣಯವನ್ನು ಅಂಗೀಕರಿಸುವುದು ಸಣ್ಣ ಹೆಜ್ಜೆಯಲ್ಲ. ಇದು ಪ್ರಜಾಪ್ರಭುತ್ವ ಮತ್ತು ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ಅತ್ಯಂತ ದೊಡ್ಡ ಹೆಜ್ಜೆಯಾಗಿದೆ ಎಂದರು

andolanait

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

9 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

9 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

9 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

9 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

9 hours ago