BREAKING NEWS

ಪ್ರಖ್ಯಾತ ಲೇಖಕ, ಅಂಕಣಕಾರ ತಾರೆಕ್ ಫತಾಹ್ ವಿಧಿವಶ

ಒಟ್ಟಾವಾ: ಖ್ಯಾತ ಪಾಕಿಸ್ಥಾನಿ-ಕೆನಡಾ ಅಂಕಣಕಾರ ಮತ್ತು ಲೇಖಕ ತಾರೆಕ್ ಫತಾಹ್ ಅವರು ಕ್ಯಾನ್ಸರ್‌ನೊಂದಿಗೆ ಸುದೀರ್ಘ ಹೋರಾಟದ ನಂತರ 73 ನೇ ವಯಸ್ಸಿನಲ್ಲಿ ಸೋಮವಾರ ನಿಧನ ಹೊಂದಿದರು ಎಂದು ಅವರ ಪುತ್ರಿ ನತಾಶಾ ಫತಾಹ್ ಹೇಳಿದ್ದಾರೆ.

ನತಾಶಾ ತನ್ನ ತಂದೆಯ ನಿಧನದ ಸುದ್ದಿಯನ್ನು ಟ್ವಿಟರ್‌ ನಲ್ಲಿ “ಪಂಜಾಬ್‌ನ ಸಿಂಹ, ಹಿಂದೂಸ್ಥಾನದ ಮಗ ಮತ್ತು ಕೆನಡಾದ ಪ್ರೇಮಿ” ಎಂದು ಬಣ್ಣಿಸಿದ್ದಾರೆ. ಫತಾಹ್ ಸತ್ಯದ ವಾಗ್ಮಿ, ನ್ಯಾಯಕ್ಕಾಗಿ ಹೋರಾಟಗಾರ ಮತ್ತು ತುಳಿತಕ್ಕೊಳಗಾದವರ ಧ್ವನಿ ಎಂದು ಅವರು ಹೇಳಿದರು.

ಫತಾಹ್ ಅವರು ಇಸ್ಲಾಂ ಧರ್ಮದ ಬಗ್ಗೆ ಪ್ರಗತಿಪರ ದೃಷ್ಟಿಕೋನಗಳು ಮತ್ತು ಪಾಕಿಸ್ಥಾನದ ಬಗ್ಗೆ ಅವರ ಬಲವಾದ ನಿಲುವುಗಳಿಗೆ ಹೆಸರುವಾಸಿಯಾಗಿದ್ದರು. ಅವರು ಭಾರತದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಬೆಂಬಲಿಸುತ್ತಿದ್ದರು.

1949 ರಲ್ಲಿ ಪಾಕಿಸ್ಥಾನದಲ್ಲಿ ಜನಿಸಿದ ಫತಾಹ್ 1980 ರ ದಶಕದ ಆರಂಭದಲ್ಲಿ ಕೆನಡಾಕ್ಕೆ ವಲಸೆ ಹೋಗಿದ್ದರು. ರಾಜಕೀಯ ಕಾರ್ಯಕರ್ತ, ಪತ್ರಕರ್ತ ಮತ್ತು ದೂರದರ್ಶನ ನಿರೂಪಕರಾಗಿ ಕೆಲಸ ಮಾಡಿದ್ದರು. ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

4 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

5 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

5 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

5 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

5 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

5 hours ago