BREAKING NEWS

ಪ್ರಖ್ಯಾತ ಲೇಖಕ, ಅಂಕಣಕಾರ ತಾರೆಕ್ ಫತಾಹ್ ವಿಧಿವಶ

ಒಟ್ಟಾವಾ: ಖ್ಯಾತ ಪಾಕಿಸ್ಥಾನಿ-ಕೆನಡಾ ಅಂಕಣಕಾರ ಮತ್ತು ಲೇಖಕ ತಾರೆಕ್ ಫತಾಹ್ ಅವರು ಕ್ಯಾನ್ಸರ್‌ನೊಂದಿಗೆ ಸುದೀರ್ಘ ಹೋರಾಟದ ನಂತರ 73 ನೇ ವಯಸ್ಸಿನಲ್ಲಿ ಸೋಮವಾರ ನಿಧನ ಹೊಂದಿದರು ಎಂದು ಅವರ ಪುತ್ರಿ ನತಾಶಾ ಫತಾಹ್ ಹೇಳಿದ್ದಾರೆ.

ನತಾಶಾ ತನ್ನ ತಂದೆಯ ನಿಧನದ ಸುದ್ದಿಯನ್ನು ಟ್ವಿಟರ್‌ ನಲ್ಲಿ “ಪಂಜಾಬ್‌ನ ಸಿಂಹ, ಹಿಂದೂಸ್ಥಾನದ ಮಗ ಮತ್ತು ಕೆನಡಾದ ಪ್ರೇಮಿ” ಎಂದು ಬಣ್ಣಿಸಿದ್ದಾರೆ. ಫತಾಹ್ ಸತ್ಯದ ವಾಗ್ಮಿ, ನ್ಯಾಯಕ್ಕಾಗಿ ಹೋರಾಟಗಾರ ಮತ್ತು ತುಳಿತಕ್ಕೊಳಗಾದವರ ಧ್ವನಿ ಎಂದು ಅವರು ಹೇಳಿದರು.

ಫತಾಹ್ ಅವರು ಇಸ್ಲಾಂ ಧರ್ಮದ ಬಗ್ಗೆ ಪ್ರಗತಿಪರ ದೃಷ್ಟಿಕೋನಗಳು ಮತ್ತು ಪಾಕಿಸ್ಥಾನದ ಬಗ್ಗೆ ಅವರ ಬಲವಾದ ನಿಲುವುಗಳಿಗೆ ಹೆಸರುವಾಸಿಯಾಗಿದ್ದರು. ಅವರು ಭಾರತದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ಬೆಂಬಲಿಸುತ್ತಿದ್ದರು.

1949 ರಲ್ಲಿ ಪಾಕಿಸ್ಥಾನದಲ್ಲಿ ಜನಿಸಿದ ಫತಾಹ್ 1980 ರ ದಶಕದ ಆರಂಭದಲ್ಲಿ ಕೆನಡಾಕ್ಕೆ ವಲಸೆ ಹೋಗಿದ್ದರು. ರಾಜಕೀಯ ಕಾರ್ಯಕರ್ತ, ಪತ್ರಕರ್ತ ಮತ್ತು ದೂರದರ್ಶನ ನಿರೂಪಕರಾಗಿ ಕೆಲಸ ಮಾಡಿದ್ದರು. ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

26 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

31 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

40 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago