ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಶೆಡ್ನ ಒಳಗೆ ನಡೆದದ್ದು ಎಲ್ಲವೂ ರೆಕಾರ್ಡ್ ಆಗಿರುತ್ತದೆ ಎಂದು ಶೆಡ್ ಮಾಲೀಕರಾದ ಜಯಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಅವರನ್ನು ಕೋಡಿಹಾಕಿದ್ದ ಶೆಡ್ ಸುತ್ತ ಚಿಚಿ ಕ್ಯಾಮೆರಾ ಇದೆ ಎಲ್ಲವೂ ರೆಕಾರ್ಡ್ ಆಗಿರುತ್ತದೆ ಎಂದು ಹೇಳಿದ್ದಾರೆ.
ಕಳೆದ 25 ವರ್ಷದಿಂದ ಕಿಶೋರ್ ಎಂಬುವವರಿಗೆ ನನ್ನ ಜಾಗವನ್ನು ಬಾಡಿಗೆಗೆ ನೀಡಿದ್ದೇನೆ. ಲೋನ್ ಕೇಸ್ನಲ್ಲಿ ಸೀಸ್ ಮಾಡಿದ ವಾಹನಗಳನ್ನು ಶೆಡ್ನಲ್ಲಿ ನಿಲ್ಲಿಸುತ್ತಿದ್ದರು. ಶೆಡ್ ಒಳಗೆ ಯಾವುದೇ ವಾಹನ ಹೋದರು ರೆಕಾರ್ಡ್ ಆಗಿರುತ್ತದೆ. ಯಾವುದೇ ವಾಹನ ಶೆಡ್ನಿಂದ ಹೊರ ಬಂದರೂ ರೆಕಾರ್ಡ್ ಆಗಿರುತ್ತದೆ ಎಂದರು.
5ರಿಂದ 6 ಎಕ್ಕರೆ ಪ್ರಾಪರ್ಟಿ ಬ್ಯಾಂಕ್ನವರದ್ದಾಗಿರುವ ಕಾರಣ ಎಲ್ಲಾ ರೀತಿಯ ಸೇಫ್ಟ್ಯನ್ನು ಮಾಡಲಾಗಿದೆ. ಹೀಗಾಗಿ ಏನನ್ನು ಮುಚ್ಚಿಡಲು ಸಾಧ್ಯವಿಲ್ಲ ಎಂದು ಹೇಳಿದರು.
ಯಾವುದೇ ವಿಚಾರವನ್ನು ಮುಚ್ಚಿಡಲು ಸಾಧ್ಯವಿಲ್ಲ. ದರ್ಶನ್ ಬಂದಿರುವುದಾಗಲಿ, ಹೋಗಿರುವುದಾಗಲಿ, ಅಥವ ರೇಣುಕಾಸ್ವಾಮಿಯನ್ನು ಕರೆತಂದಿರುವುದು, ಹೊಡೆದಿರುವುದು ಎಲ್ಲವೂ ರೆಕಾರ್ಡ್ ಆಗಿರುತ್ತದೆ ಎಂದರು.
ಇಲ್ಲಿವರೆಗೆ ಯಾವ ಪೊಲೀಸರು ನನ್ನನ್ನು ಸಂಪರ್ಕ ಮಾಡಿಲ್ಲ. ಒಂದು ವೇಳೆ ಮಾಡಿದರೆ ನನ್ನನ್ನು ಕರೆದರೆ ವಿಚಾರಣೆಗೆ ಹೋಗುತ್ತೇನೆ ಎಂದು ಹೇಳಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…