BREAKING NEWS

ಸತತ ನಾಲ್ಕನೇ ಬಾರಿ ರೆಪೊ ದರ ಯಥಾಸ್ಥಿತಿ: ಆರ್‌ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್  ತನ್ನ ಪ್ರಮುಖ ಸಾಲದ ದರವನ್ನು ಅಂದರೆ ರೆಪೊ ದರವನ್ನು ಸತತ ನಾಲ್ಕನೇ ಬಾರಿಗೆ ಶೇಕಡಾ 6.5ರಷ್ಟು ಬದಲಾಯಿಸದೆ ಹಾಗೆ ಉಳಿಸಲು ನಿರ್ಧರಿಸಿದೆ. ಕೇಂದ್ರ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಅಂದರೆ ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಸಾಲದ ಬಡ್ಡಿದರಗಳು ಬದಲಾಗದೆ ಉಳಿಯುವ ಸಾಧ್ಯತೆಯಿದೆ. ದ್ವಿದಳ ಧಾನ್ಯಗಳು ಮತ್ತು ಎಣ್ಣೆ ಬೀಜಗಳಂತಹ ಕೆಲವು ಪ್ರಮುಖ ಬೆಳೆಗಳಿಗೆ ಖಾರಿಫ್ ಬಿತ್ತನೆಯ ಕುಸಿತ, ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಮತ್ತು ಜಾಗತಿಕ ಆಹಾರ ಮತ್ತು ಇಂಧನ ಬೆಲೆಗಳಲ್ಲಿನ ಚಂಚಲತೆಯಿಂದ ಒಟ್ಟಾರೆ ಹಣದುಬ್ಬರ ದೃಷ್ಟಿಕೋನವು ಅನಿಶ್ಚಿತತೆಯಿಂದ ಮುಚ್ಚಿಹೋಗಿದೆ ಎಂದು ಕೂಡ ಶಕ್ತಿಕಾಂತ್ ದಾಸ್ ತಿಳಿಸಿದರು.

ಸೆಪ್ಟೆಂಬರ್‌ ತಿಂಗಳಲ್ಲಿ ಹಣದುಬ್ಬರ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಆರ್‌ಬಿಐ ಗವರ್ನರ್ ಹೇಳಿದ್ದರು. ಆದರೆ ಒಟ್ಟಾರೆ ದೃಷ್ಟಿಕೋನವು ಅನಿಶ್ಚಿತತೆಗಳಿಂದ ಮಸುಕಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರವು 5.4% ಮತ್ತು ಮುಂದಿನ ಹಣಕಾಸು ವರ್ಷದಲ್ಲಿ 5.2% ಕ್ಕೆ ಇಳಿಯುವ ನಿರೀಕ್ಷೆಯಿದೆ ಎಂದರು.

ಆದಾಗ್ಯೂ, ಪ್ರಸಕ್ತ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಆಹಾರ ಹಣದುಬ್ಬರವು ನಿರಂತರವಾದ ಇಳಿಕೆಯನ್ನು ಕಾಣುವುದಿಲ್ಲ ಎಂದು ಅಂದಾಜಿಸಲಾಗಿದೆ.

ಆಗಸ್ಟ್‌ನಲ್ಲಿ ಹಣದುಬ್ಬರವು 6.83% ತಲುಪಿದ ಹಿನ್ನೆಲೆಯಲ್ಲಿ ಎಂಪಿಸಿ ಸಭೆ ನಡೆಸಲಾಯಿತು. ಪ್ರಸ್ತುತ ತಿಂಗಳ ಅಂಕಿಅಂಶವನ್ನು ಮುಂದಿನ ವಾರ ನಿರೀಕ್ಷಿಸಲಾಗಿದೆ. ಚಿಲ್ಲರೆ ಹಣದುಬ್ಬರವನ್ನು ಎರಡೂ ಕಡೆಗಳಲ್ಲಿ 2% ನಷ್ಟು ಮಾರ್ಜಿನ್‌ನೊಂದಿಗೆ 4% ನಲ್ಲಿ ಇರಿಸಿಕೊಳ್ಳಲು ಸರ್ಕಾರವು ಕೇಂದ್ರೀಯ ಬ್ಯಾಂಕ್‌ಗೆ ಆದೇಶಿಸಿದೆ.

ಹಠಾತ್ ಆಹಾರ ಮತ್ತು ಇಂಧನ ಬೆಲೆ ಏರಿಕೆಯನ್ನು ನಿಭಾಯಿಸಲು ವಿತ್ತೀಯ ನೀತಿಯು ಸಂಪೂರ್ಣ ಸಿದ್ಧತೆಯಲ್ಲಿರಬೇಕು. ಬಲವಾದ ಬೇಡಿಕೆಯ ಹಿನ್ನೆಲೆಯಲ್ಲಿ ದೇಶೀಯ ಆರ್ಥಿಕತೆಯು ಸ್ಥಿತಿಸ್ಥಾಪಕತ್ವವನ್ನು ಪ್ರದರ್ಶಿಸಿದೆ ಎಂದು ಹೇಳಿದರು.ಭಾರತವು ವಿಶ್ವದ ಹೊಸ ಬೆಳವಣಿಗೆಯ ಸೂತ್ರಧಾರನಾಗಲು ಸಜ್ಜಾಗಿದೆ. ಆರ್ ಬಿಐ ಪ್ರಸಕ್ತ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಶೇಕಡಾ 6.5ರಲ್ಲಿ ಉಳಿಸಿಕೊಂಡಿದೆ.

ರೆಪೊ ದರ : ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರ ರೆಪೊ ದರವಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು ವಿತ್ತೀಯ ಅಧಿಕಾರಿಗಳು ರೆಪೊ ದರವನ್ನು ಬಳಸುತ್ತಾರೆ.

ಹಣದುಬ್ಬರದ ಸಂದರ್ಭದಲ್ಲಿ, ಕೇಂದ್ರ ಬ್ಯಾಂಕು ಆರ್ ಬಿಐ ರೆಪೊ ದರವನ್ನು ಹೆಚ್ಚಿಸುತ್ತವೆ, ಸಾಧ್ಯವಾದಷ್ಟು ಬ್ಯಾಂಕುಗಳು ಆರ್ ಬಿಐಯಿಂದ ಸಾಲ ಪಡೆಯುವುದನ್ನು ತಡೆಯುತ್ತದೆ. ಇದು ಅಂತಿಮವಾಗಿ ಆರ್ಥಿಕತೆಯಲ್ಲಿ ಹಣ ಪೂರೈಕೆಯನ್ನು ಕಡಿಮೆ ಮಾಡಿ ಹಣದುಬ್ಬರ ನಿಯಂತ್ರಿಸಲು ಸಹಾಯ ಮಾಡುತ್ತದೆ.

ರಿವರ್ಸ್ ರೆಪೊ ದರ : ಇದಕ್ಕೆ ಪ್ರತಿಯಾಗಿ ಆರ್‌ಬಿಐ ಅಲ್ಪಾವಧಿಗೆ ಬ್ಯಾಂಕುಗಳಿಂದ ಹಣವನ್ನು ಸಾಲ ಪಡೆದು ಆ ಹಣದ ಮೇಲೆ ನೀಡುವ ಬಡ್ಡಿದರವನ್ನು ರಿವರ್ಸ್ ರೆಪೊ ದರ ಎಂದು ಕರೆಯುತ್ತಾರೆ.

andolanait

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

1 hour ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

4 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

7 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

7 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

7 hours ago