BREAKING NEWS

ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ; ಸಚಿವ ಜಮೀರ್ ಅಹಮದ್ ಭರವಸೆ

ಬೆಂಗಳೂರು: ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಪ್ರಾರಂಭಕ್ಕೆ ಅನುಮತಿ ದೊರಕಿಸಿಕೊಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಭರವಸೆ ನೀಡಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಮಂಗಳವಾರ ಬೌದ್ಧ ಗುರುಗಳ ನಿಯೋಗದಿಂದ ಮನವಿ ಸ್ವೀಕರಿಸಿದ ಸಚಿವರು, “ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಮತ್ತು ಚುನಾವಣಾ ಗುರುತಿನ ಚೀಟಿ ಪಡೆಯಲು ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಮೈಸೂರಿನ ಮೂಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನಕ್ಕಾಗಿ ಮನವಿ ಸಲ್ಲಿಸಿರುವ ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಚೋದ್ದಿ ತಾಶಿ ಲುಮ್ಪೋ’ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ನಿಯೋಗ ಮನವಿ ಮಾಡಿತು.

500 ಬೌದ್ಧ ಗುರುಗಳು ಈ ಸೊಸೈಟಿಯಲ್ಲಿ ಇದ್ದು, ಬಿಹಾರದ ಬೋದ್ ಗಯಾ ಕೇಂದ್ರದ ಜತೆಗೂಡಿ ಕೆಲಸ ಮಾಡುತ್ತಿದೆ ಎಂದು ತಿಳಿಸಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವ ಭರವಸೆ ನೀಡಿದರು.

ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ನಿಮ್ಮ ಸಮುದಾಯದ ಸಮಸ್ಯೆ ಪರಿಹಾರಕ್ಕೆ ಅನುಕೂಲವಾಗುತ್ತದೆ. ಆ ಬಗ್ಗೆ ಗಮನ ಹರಿಸಲಾಗುವುದು. ಒಂದು ವರ್ಷದಲ್ಲಿ ನಿಮ್ಮೆಲ್ಲ ಬೇಡಿಕೆ ಈಡೇರಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

7 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

8 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

10 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

10 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

10 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

10 hours ago