BREAKING NEWS

ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ; ಸಚಿವ ಜಮೀರ್ ಅಹಮದ್ ಭರವಸೆ

ಬೆಂಗಳೂರು: ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಪ್ರಾರಂಭಕ್ಕೆ ಅನುಮತಿ ದೊರಕಿಸಿಕೊಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಭರವಸೆ ನೀಡಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಮಂಗಳವಾರ ಬೌದ್ಧ ಗುರುಗಳ ನಿಯೋಗದಿಂದ ಮನವಿ ಸ್ವೀಕರಿಸಿದ ಸಚಿವರು, “ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಮತ್ತು ಚುನಾವಣಾ ಗುರುತಿನ ಚೀಟಿ ಪಡೆಯಲು ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಮೈಸೂರಿನ ಮೂಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನಕ್ಕಾಗಿ ಮನವಿ ಸಲ್ಲಿಸಿರುವ ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಚೋದ್ದಿ ತಾಶಿ ಲುಮ್ಪೋ’ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ನಿಯೋಗ ಮನವಿ ಮಾಡಿತು.

500 ಬೌದ್ಧ ಗುರುಗಳು ಈ ಸೊಸೈಟಿಯಲ್ಲಿ ಇದ್ದು, ಬಿಹಾರದ ಬೋದ್ ಗಯಾ ಕೇಂದ್ರದ ಜತೆಗೂಡಿ ಕೆಲಸ ಮಾಡುತ್ತಿದೆ ಎಂದು ತಿಳಿಸಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವ ಭರವಸೆ ನೀಡಿದರು.

ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ನಿಮ್ಮ ಸಮುದಾಯದ ಸಮಸ್ಯೆ ಪರಿಹಾರಕ್ಕೆ ಅನುಕೂಲವಾಗುತ್ತದೆ. ಆ ಬಗ್ಗೆ ಗಮನ ಹರಿಸಲಾಗುವುದು. ಒಂದು ವರ್ಷದಲ್ಲಿ ನಿಮ್ಮೆಲ್ಲ ಬೇಡಿಕೆ ಈಡೇರಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.

andolanait

Recent Posts

ಕೇಂದ್ರ ಬಜೆಟ್‌ 2026: 12 ಕ್ಯಾನ್ಸರ್‌ ಔಷಧಗಳಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…

57 mins ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…

1 hour ago

ಕೇಂದ್ರ ಬಜೆಟ್‌ 2026: ಪ್ರತಿ ಜಿಲ್ಲೆಗೊಂದು ಬಾಲಕಿಯರ ಹಾಸ್ಟೆಲ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ…

1 hour ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

2 hours ago

ಕೇಂದ್ರ ಬಜೆಟ್‌-2026: ಬೆಂಗಳೂರಿಗೆ ಹೈಸ್ಪೀಡ್‌ ರೈಲು ಕಾರಿಡಾರ್‌ ಘೋಷಣೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

2 hours ago

ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಸೆಮಿಕಂಡಕ್ಟರ್‌ ಮಿಷನ್‌ 2.0…

2 hours ago