BREAKING NEWS

ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ; ಸಚಿವ ಜಮೀರ್ ಅಹಮದ್ ಭರವಸೆ

ಬೆಂಗಳೂರು: ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು ಹಾಗೂ ಉನ್ನತ ಶಿಕ್ಷಣ ಪ್ರಾರಂಭಕ್ಕೆ ಅನುಮತಿ ದೊರಕಿಸಿಕೊಡಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಭರವಸೆ ನೀಡಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಮಂಗಳವಾರ ಬೌದ್ಧ ಗುರುಗಳ ನಿಯೋಗದಿಂದ ಮನವಿ ಸ್ವೀಕರಿಸಿದ ಸಚಿವರು, “ಸಮುದಾಯದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ ಮತ್ತು ಚುನಾವಣಾ ಗುರುತಿನ ಚೀಟಿ ಪಡೆಯಲು ಉಂಟಾಗುತ್ತಿರುವ ಸಮಸ್ಯೆ ಬಗೆಹರಿಸಲು ಸಂಬಂಧಪಟ್ಟ ಸಚಿವರ ಜತೆ ಚರ್ಚಿಸಲಾಗುವುದು” ಎಂದು ಹೇಳಿದರು.

ಮೈಸೂರಿನ ಮೂಡಾದಲ್ಲಿ ಶೈಕ್ಷಣಿಕ ಉದ್ದೇಶಕ್ಕೆ ನಿವೇಶನಕ್ಕಾಗಿ ಮನವಿ ಸಲ್ಲಿಸಿರುವ ಮತ್ತು ದಲೈ ಲಾಮಾ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಚೋದ್ದಿ ತಾಶಿ ಲುಮ್ಪೋ’ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ನಿಯೋಗ ಮನವಿ ಮಾಡಿತು.

500 ಬೌದ್ಧ ಗುರುಗಳು ಈ ಸೊಸೈಟಿಯಲ್ಲಿ ಇದ್ದು, ಬಿಹಾರದ ಬೋದ್ ಗಯಾ ಕೇಂದ್ರದ ಜತೆಗೂಡಿ ಕೆಲಸ ಮಾಡುತ್ತಿದೆ ಎಂದು ತಿಳಿಸಿತು. ಇದಕ್ಕೆ ಸ್ಪಂದಿಸಿದ ಸಚಿವರು ತಕ್ಷಣ ಅನುದಾನ ನೀಡುವ ಭರವಸೆ ನೀಡಿದರು.

ಅಲ್ಪಸಂಖ್ಯಾತ ಆಯೋಗ, ನಿರ್ದೇಶನಾಲಯ, ಅಭಿವೃದ್ಧಿ ನಿಗಮ ಹೀಗೆ ಎಲ್ಲ ಕಡೆ ಸಮುದಾಯಕ್ಕೆ ಪ್ರಾತಿನಿಧ್ಯ ಕಲ್ಪಿಸಿದರೆ ನಿಮ್ಮ ಸಮುದಾಯದ ಸಮಸ್ಯೆ ಪರಿಹಾರಕ್ಕೆ ಅನುಕೂಲವಾಗುತ್ತದೆ. ಆ ಬಗ್ಗೆ ಗಮನ ಹರಿಸಲಾಗುವುದು. ಒಂದು ವರ್ಷದಲ್ಲಿ ನಿಮ್ಮೆಲ್ಲ ಬೇಡಿಕೆ ಈಡೇರಿಸಲಾಗುವುದು ಎಂದು ಸಚಿವರು ಆಶ್ವಾಸನೆ ನೀಡಿದರು.

andolanait

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

6 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

13 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

13 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago