ಶಿವಮೊಗ್ಗ: ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತದಿಂದ ಶೀಘ್ರ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.
ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಲ್ಲಿ ನನಗೆ ಅವಕಾಶ ಸಿಗುವ ಸಾಧ್ಯತೆ ಇಲ್ಲ. ಆದರೂ ಕಣದಿಂದ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ ಅವರು, ಕಾಂಗ್ರೆಸ್ ಸೇರುವ ವಿಚಾರದಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದರು.
ಈಶ್ವರಪ್ಪ ಹಾಗೂ ಅವರ ಪುತ್ರ ಯಾರೇ ನಿಂತರೂ ಸ್ಪರ್ಧೆ ಮಾಡುವೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಕಣಕ್ಕೆ ಇಳಿಯಬೇಕೆಂಬ ಕಾರಣಕ್ಕೆ ನನ್ನ ಭಾವನೆಯನ್ನ ಈ ಹಿಂದೆ ಪ್ರಕಟಿಸಿದ್ದೇನೆ. ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದೆ. ಅದರೆ ಪಕ್ಷದಿಂದ ನನಗೆ ಟಿಕೆಟ್ ಸಿಗುವ ಲಕ್ಷಣಗಳು ಕಾಣುತ್ತಿಲ್ಲ ಎಂದರು.
ಬಿಜೆಪಿ ಪಕ್ಷದ ಬಗ್ಗೆ ನನಗೆ ಆಕ್ಷೇಪವಿಲ್ಲ. ಆದರೆ ನಾಯಕರ ವಿರುದ್ಧವಿದೆ. ಬಿ.ಎಸ್.ಯಡಿಯೂರಪ್ಪ ಪುತ್ರರನ್ನ ರಾಜಕೀಯಕ್ಕೆ ಕರೆತಂದಾಗ ವಿರೋಧಿಸಿದ್ದ ಈಶ್ವರಪ್ಪ ಈಗ ತಮ್ಮ ಮಗನನ್ನ ಚುನಾವಣೆ ರಾಜಕೀಯಕ್ಕೆ ಕರೆತರುವ ಪ್ರಯತ್ನ ಮಾಡುತ್ತಿರುವುದು ಏಕೆ ಎಂದು ವಾಗ್ದಾಳಿ ನಡೆಸಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…