ಮಂಡ್ಯ : ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ನಡೆಸಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಟಿಪ್ಪು ವಕ್ಫ್ ಎಸ್ಟೇಟ್ನಿಂದ ಟಿಪ್ಪು ಜಯಂತಿ ನಡೆಸಲು ಚಿಂತನೆ ನಡೆಸಲಾಗಿದೆ. ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಸೇರುವ ಸಾಧ್ಯತೆಯಿದ್ದು, ಸೂಕ್ಷ್ಮ ಪ್ರದೇಶವಾಗಿರುವ ಶ್ರೀರಂಪಟ್ಟಣದಲ್ಲಿ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶಿಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಿಷೇಧಾಜ್ಞೆ ಇರಲಿದೆ. ಮೆರವಣಿಗೆ, ಪ್ರತಿಭಟನೆ, ರ್ಯಾಲಿಗಳಿಗೆ ನಿರ್ಬಂಧಿಸಲಾಗಿದೆ. ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆಗೂ ನಿಷೇಧ ಹೇರಲಾಗಿದೆ. ಘೋಷಣೆ ಕೂಗದಂತೆ, ಪ್ರಚೋದನಕಾರಿ ಚಿತ್ರವಿರುವ ಟೀ ಶರ್ಟ್ ಧರಿಸದಂತೆಯೂ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕರ ಆಸ್ತಿ-ಪಾಸ್ತಿ, ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹೊರ ಜಿಲ್ಲೆಗಳಿಂದ ಬರುವ ಸಾರ್ವಜನಿಕರು ಹಾಗೂ ಪ್ರವಾಸಿಗರ ಮೇಲೆ ನಿಗಾವಹಿಸಲಾಗುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…