BREAKING NEWS

ಚಿಲ್ಲರೆ ರಾಜಕಾರಣ ಕಾಂಗ್ರೆಸ್‌ ಡಿಎನ್‌ಎ ನಲ್ಲೇ ಇದೆ : ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ : ನೂತನ ಸಂಸತ್ ಭವನ ವಿಚಾರವಾಗಿ ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಚಿಲ್ಲರೆ ರಾಜಕಾರಣ ಮಾಡುವುದು ಕಾಂಗ್ರೆಸ್‌ನ ಡಿಎನ್‌ಎನಲ್ಲಿಯೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿಂದು ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೂತನ ಸಂಸತ್‌ ಭವನ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದಲಿತರೆಂಬ ಕಾರಣಕ್ಕೆ ಆಹ್ವಾನಿಸಲಿಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್‌ನವರು ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಏಕೆ ಬೆಂಬಲ ನೀಡಿರಲಿಲ್ಲ? ಸೋಲುತ್ತೇವೆಂದು ಗೊತ್ತಿದ್ದರೂ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ಅದು ಚಿಲ್ಲರೆ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಆಧುನಿಕ ವ್ಯವಸ್ಥೆಗೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ಆದರೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್‌ ನೂತನ ಸಂಸತ್ ಭವನವನ್ನು ಮೋದಿ ಮಲ್ಟಿಫ್ಲೆಕ್ಸ್ ಎಂದು ಕೇವಲವಾಗಿ ಹೇಳಿಕೆ ನೀಡಿದ್ದಾರೆ. ವಿಶ್ವವೇ ಈ ಭವನ ಮೆಚ್ಚಿಕೊಳ್ಳುತ್ತಿದೆ, ಒಳ್ಳೆಯ ಕೆಲಸವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಅವರ ಕೆಳಮಟ್ಟದ ಮನಸ್ಥಿತಿ ಏನೆಂಬುದು ಇದರಿಂದ ಅರ್ಥವಾಗುತ್ತದೆ. ಜನರೇ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದಿದ್ದಾರೆ.

2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾತಿಗಣತಿ ಮಾಡಲಿಲ್ಲ. ಆದರೀಗ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡುತ್ತಿದ್ದಾರೆ‌. ಅತಿವೃಷ್ಟಿ , ಅನಾವೃಷ್ಟಿಯಾದರೂ ಪ್ರಧಾನಿ ಮೋದಿ ಅವರನ್ನು ತೆಗಳುತ್ತಾರೆ. ಅವರ ಜನಪ್ರಿಯತೆ ಸಹಿಸಿಕೊಳ್ಳಲಾಗದೇ ಕನಸಲ್ಲೂ ನೆನಪು ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ನೀಡಿ 33% ಮಹಿಳಾ ಮೀಸಲಾತಿ ಕಲ್ಪಿಸಲಾಗುತ್ತದೆ. ಕಾಂಗ್ರೆಸ್ ಈ ಹಿಂದೆಯೂ ಮೀಸಲಾತಿ ಕಲ್ಪಿಸಿಲ್ಲ, ಮುಂದೆಯೂ ಕಲ್ಪಿಸುವುದಿಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಹಿಳಾ ಮೀಸಲಾತಿ ಜಾರಿ 100% ಖಚಿತ, ಆದ್ರೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಅಷ್ಟೇ ಎಂದು ಹೇಳಿದ್ದಾರೆ.

lokesh

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

30 mins ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

34 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

40 mins ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

52 mins ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

55 mins ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

1 hour ago