ಹುಬ್ಬಳ್ಳಿ : ನೂತನ ಸಂಸತ್ ಭವನ ವಿಚಾರವಾಗಿ ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಚಿಲ್ಲರೆ ರಾಜಕಾರಣ ಮಾಡುವುದು ಕಾಂಗ್ರೆಸ್ನ ಡಿಎನ್ಎನಲ್ಲಿಯೇ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿಂದು ನಡೆದ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೂತನ ಸಂಸತ್ ಭವನ ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದಲಿತರೆಂಬ ಕಾರಣಕ್ಕೆ ಆಹ್ವಾನಿಸಲಿಲ್ಲ ಎಂಬ ಮಲ್ಲಿಕಾರ್ಜುನ ಖರ್ಗೆ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ನವರು ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಏಕೆ ಬೆಂಬಲ ನೀಡಿರಲಿಲ್ಲ? ಸೋಲುತ್ತೇವೆಂದು ಗೊತ್ತಿದ್ದರೂ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ಅದು ಚಿಲ್ಲರೆ ರಾಜಕಾರಣ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಆಧುನಿಕ ವ್ಯವಸ್ಥೆಗೆ ತಕ್ಕಂತೆ ನೂತನ ಸಂಸತ್ ಭವನ ನಿರ್ಮಿಸಲಾಗಿದೆ. ಆದರೆ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ನೂತನ ಸಂಸತ್ ಭವನವನ್ನು ಮೋದಿ ಮಲ್ಟಿಫ್ಲೆಕ್ಸ್ ಎಂದು ಕೇವಲವಾಗಿ ಹೇಳಿಕೆ ನೀಡಿದ್ದಾರೆ. ವಿಶ್ವವೇ ಈ ಭವನ ಮೆಚ್ಚಿಕೊಳ್ಳುತ್ತಿದೆ, ಒಳ್ಳೆಯ ಕೆಲಸವನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂಬುದಕ್ಕೆ ಇದೇ ಸಾಕ್ಷಿ. ಅವರ ಕೆಳಮಟ್ಟದ ಮನಸ್ಥಿತಿ ಏನೆಂಬುದು ಇದರಿಂದ ಅರ್ಥವಾಗುತ್ತದೆ. ಜನರೇ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದಿದ್ದಾರೆ.
2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾತಿಗಣತಿ ಮಾಡಲಿಲ್ಲ. ಆದರೀಗ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡುತ್ತಿದ್ದಾರೆ. ಅತಿವೃಷ್ಟಿ , ಅನಾವೃಷ್ಟಿಯಾದರೂ ಪ್ರಧಾನಿ ಮೋದಿ ಅವರನ್ನು ತೆಗಳುತ್ತಾರೆ. ಅವರ ಜನಪ್ರಿಯತೆ ಸಹಿಸಿಕೊಳ್ಳಲಾಗದೇ ಕನಸಲ್ಲೂ ನೆನಪು ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ವರ್ಗಗಳಿಗೂ ಪ್ರಾತಿನಿಧ್ಯ ನೀಡಿ 33% ಮಹಿಳಾ ಮೀಸಲಾತಿ ಕಲ್ಪಿಸಲಾಗುತ್ತದೆ. ಕಾಂಗ್ರೆಸ್ ಈ ಹಿಂದೆಯೂ ಮೀಸಲಾತಿ ಕಲ್ಪಿಸಿಲ್ಲ, ಮುಂದೆಯೂ ಕಲ್ಪಿಸುವುದಿಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಹಿಳಾ ಮೀಸಲಾತಿ ಜಾರಿ 100% ಖಚಿತ, ಆದ್ರೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಅಷ್ಟೇ ಎಂದು ಹೇಳಿದ್ದಾರೆ.
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…