ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು.
ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಪೋನ್ ಮಾಡಿದ್ದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಪಕ್ಷದ ದೃಷ್ಟಿಯಿಂದ ಎಲ್ಲಾ ಒಳ್ಳೆಯದು ಆಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಯಡಿಯೂರಪ್ಪನವರನ್ನು ಭೇಟಿಯಾಗಬೇಕಿತ್ತು. ವಿಮಾನ ತಡವಾಗಿದ್ದರಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಗೆ ಹೋಗಿ ಬಂದ ನಂತರ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ ಎಂದರು.
ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಅಲ್ಲದೇ ಕಳೆದ ಎರಡು ವರ್ಷದಿಂದ ಯಾವುದೇ ಸ್ಥಾನಮಾನ ಇಲ್ಲ. ಶಾಸಕನಾಗಿ ಕೆಲಸ ಮಾಡಿಕೊಂಡಿದ್ದೆ. ಸಕಾರಣ ಇಲ್ಲದೆ ಟಿಕೆಟ್ ನಿರಾಕರಣೆ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ ಬಳಿಕ ಮುಂದೇನಾಗುತ್ತೊ ನೋಡೋಣ ಎಂದು ಹೇಳಿದರು.
ಯಾವುದೇ ಕಾರಣವಿಲ್ಲದೇ ನಾನು ನಿವೃತ್ತಿ ಘೋಷಣೆ ಮಾಡಲು ಸಿದ್ಧನಿದ್ದೇನೆ. ಆದರೆ, ರಾಜಕಾರಣದಲ್ಲಿ ಗೌರವಯುತವಾಗಿ ಹೊರಗೆ ಹೋಗಬೇಕು ಎಂಬುದು ನನ್ನ ಅಭಿಪ್ರಾಯ. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು ಎಂದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…