ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು.
ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಪೋನ್ ಮಾಡಿದ್ದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಪಕ್ಷದ ದೃಷ್ಟಿಯಿಂದ ಎಲ್ಲಾ ಒಳ್ಳೆಯದು ಆಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಯಡಿಯೂರಪ್ಪನವರನ್ನು ಭೇಟಿಯಾಗಬೇಕಿತ್ತು. ವಿಮಾನ ತಡವಾಗಿದ್ದರಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಗೆ ಹೋಗಿ ಬಂದ ನಂತರ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ ಎಂದರು.
ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಅಲ್ಲದೇ ಕಳೆದ ಎರಡು ವರ್ಷದಿಂದ ಯಾವುದೇ ಸ್ಥಾನಮಾನ ಇಲ್ಲ. ಶಾಸಕನಾಗಿ ಕೆಲಸ ಮಾಡಿಕೊಂಡಿದ್ದೆ. ಸಕಾರಣ ಇಲ್ಲದೆ ಟಿಕೆಟ್ ನಿರಾಕರಣೆ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ ಬಳಿಕ ಮುಂದೇನಾಗುತ್ತೊ ನೋಡೋಣ ಎಂದು ಹೇಳಿದರು.
ಯಾವುದೇ ಕಾರಣವಿಲ್ಲದೇ ನಾನು ನಿವೃತ್ತಿ ಘೋಷಣೆ ಮಾಡಲು ಸಿದ್ಧನಿದ್ದೇನೆ. ಆದರೆ, ರಾಜಕಾರಣದಲ್ಲಿ ಗೌರವಯುತವಾಗಿ ಹೊರಗೆ ಹೋಗಬೇಕು ಎಂಬುದು ನನ್ನ ಅಭಿಪ್ರಾಯ. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು ಎಂದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…