BREAKING NEWS

ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದ ರಿಷಿ ಸುನಕ್ ಪೋಷಕರು

ರಾಯಚೂರು : ಜಿ-20 ಶೃಂಗಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪೋಷಕರು ಭಾರತದಲ್ಲೇ ಉಳಿದುಕೊಂಡಿದ್ದು ರಾಯರ ದರ್ಶನ ಪಡೆದಿದ್ದಾರೆ.

ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಇವರೊಂದಿಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ಬೀಗತಿಯಾಗಿರುವ ಸುಧಾಮೂರ್ತಿ ಅವರು ಕೂಡ ಜೊತೆ ಆಗಮಿಸಿದ್ದರು. ಮೊದಲು ರಾಯರ ದರ್ಶನ ಪಡೆದು, ಬಳಿಕ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶಿರ್ವಾದ ಪಡೆದರು. ಸುಧಾಮೂರ್ತಿ ಹಾಗೂ ರಿಷಿ ಸುನಕ್ ಪೋಷಕರಿಗೆ ಶ್ರೀಗಳು ಆಶಿರ್ವಚನ ಮಾಡಿದರು. ನಂತರ ಪರಿಮಳ ಪ್ರಸಾದ ಹಾಗೂ ಮಂತ್ರಾಕ್ಷತೆ ನೀಡಿ ಆಶಿರ್ವದಿಸಿದ್ದು,ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಮಂತ್ರಾಕ್ಷತೆ, ಪರಿಮಳ ಪ್ರಸಾದ ತಲುಪಿಸಲು ತಿಳಿಸಿದರು.

ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ಜೊತೆ ರಿಷಿ ಸುನಾಕ್ ಅವರ ತಂದೆ-ತಾಯಿ ಕೂಡ ಭಾರತಕ್ಕೆ ಬಂದಿದ್ದಾರೆ. ಸದ್ಯ ರಿಷಿ ಸುನಾಕ್ ಅವರ ಕುಟುಂಬ ಆಧ್ಯಾತ್ಮಿಕತೆಯಲ್ಲಿ ತೊಡಗಿಕೊಳ್ಳುತ್ತಿದ್ದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಶೃಂಗಸಭೆ ವೇಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದ ರಿಷಿ ಸುನಕ್‌ ದಂಪತಿ ಫೋಟೋಗಳು ವೈರಲ್ ಆಗಿದ್ದವು. ಬಳಿಕ ರಿಷಿ ಸುನಾಕ್ ಅವರ ತಾಯಿ ಉಷಾ ಸುನಕ್‌ ಅವರು ತಮ್ಮ ಬೀಗತಿ ಸುಧಾಮೂರ್ತಿ ಅವರೊಂದಿಗೆ ಬೆಂಗಳೂರಿನ ಶಾಸಕ ಉದಯ ಗರುಡಾಚಾರ್‌ ಅವರ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗಿಯಾಗಿದ್ದು ಜನರ ಮೆಚ್ಚುಗೆಗೆ ಕಾರಣವಾಗಿತ್ತು. ಇದೀಗ ರಿಷಿ ಸುನಾಕ್ ಅವರ ಪೋಷಕರು ಮಂತ್ರಾಲಯದ ರಾಯರ ದರ್ಶನ ಮಾಡಿದ್ದಾರೆ.

lokesh

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

9 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

9 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

10 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

11 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

11 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

11 hours ago