BREAKING NEWS

ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದ ರಿಷಿ ಸುನಕ್ ಪೋಷಕರು

ರಾಯಚೂರು : ಜಿ-20 ಶೃಂಗಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪೋಷಕರು ಭಾರತದಲ್ಲೇ ಉಳಿದುಕೊಂಡಿದ್ದು ರಾಯರ ದರ್ಶನ ಪಡೆದಿದ್ದಾರೆ.

ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಇವರೊಂದಿಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ಬೀಗತಿಯಾಗಿರುವ ಸುಧಾಮೂರ್ತಿ ಅವರು ಕೂಡ ಜೊತೆ ಆಗಮಿಸಿದ್ದರು. ಮೊದಲು ರಾಯರ ದರ್ಶನ ಪಡೆದು, ಬಳಿಕ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶಿರ್ವಾದ ಪಡೆದರು. ಸುಧಾಮೂರ್ತಿ ಹಾಗೂ ರಿಷಿ ಸುನಕ್ ಪೋಷಕರಿಗೆ ಶ್ರೀಗಳು ಆಶಿರ್ವಚನ ಮಾಡಿದರು. ನಂತರ ಪರಿಮಳ ಪ್ರಸಾದ ಹಾಗೂ ಮಂತ್ರಾಕ್ಷತೆ ನೀಡಿ ಆಶಿರ್ವದಿಸಿದ್ದು,ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಮಂತ್ರಾಕ್ಷತೆ, ಪರಿಮಳ ಪ್ರಸಾದ ತಲುಪಿಸಲು ತಿಳಿಸಿದರು.

ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿ ಜೊತೆ ರಿಷಿ ಸುನಾಕ್ ಅವರ ತಂದೆ-ತಾಯಿ ಕೂಡ ಭಾರತಕ್ಕೆ ಬಂದಿದ್ದಾರೆ. ಸದ್ಯ ರಿಷಿ ಸುನಾಕ್ ಅವರ ಕುಟುಂಬ ಆಧ್ಯಾತ್ಮಿಕತೆಯಲ್ಲಿ ತೊಡಗಿಕೊಳ್ಳುತ್ತಿದ್ದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಶೃಂಗಸಭೆ ವೇಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದ ರಿಷಿ ಸುನಕ್‌ ದಂಪತಿ ಫೋಟೋಗಳು ವೈರಲ್ ಆಗಿದ್ದವು. ಬಳಿಕ ರಿಷಿ ಸುನಾಕ್ ಅವರ ತಾಯಿ ಉಷಾ ಸುನಕ್‌ ಅವರು ತಮ್ಮ ಬೀಗತಿ ಸುಧಾಮೂರ್ತಿ ಅವರೊಂದಿಗೆ ಬೆಂಗಳೂರಿನ ಶಾಸಕ ಉದಯ ಗರುಡಾಚಾರ್‌ ಅವರ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗಿಯಾಗಿದ್ದು ಜನರ ಮೆಚ್ಚುಗೆಗೆ ಕಾರಣವಾಗಿತ್ತು. ಇದೀಗ ರಿಷಿ ಸುನಾಕ್ ಅವರ ಪೋಷಕರು ಮಂತ್ರಾಲಯದ ರಾಯರ ದರ್ಶನ ಮಾಡಿದ್ದಾರೆ.

lokesh

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

8 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

9 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

11 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago