ರಾಯಚೂರು : ಜಿ-20 ಶೃಂಗಸಭೆ ಹಿನ್ನೆಲೆ ಬೆಂಗಳೂರಿಗೆ ಆಗಮಿಸಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪೋಷಕರು ಭಾರತದಲ್ಲೇ ಉಳಿದುಕೊಂಡಿದ್ದು ರಾಯರ ದರ್ಶನ ಪಡೆದಿದ್ದಾರೆ.
ಯಶ್ವೀರ್ ಸುನಕ್ ಹಾಗೂ ಉಷಾ ಸುನಕ್ ಅವರು ಮಂತ್ರಾಲಯ ರಾಯರ ದರ್ಶನ ಪಡೆದಿದ್ದಾರೆ. ಇವರೊಂದಿಗೆ ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ಬೀಗತಿಯಾಗಿರುವ ಸುಧಾಮೂರ್ತಿ ಅವರು ಕೂಡ ಜೊತೆ ಆಗಮಿಸಿದ್ದರು. ಮೊದಲು ರಾಯರ ದರ್ಶನ ಪಡೆದು, ಬಳಿಕ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಶಿರ್ವಾದ ಪಡೆದರು. ಸುಧಾಮೂರ್ತಿ ಹಾಗೂ ರಿಷಿ ಸುನಕ್ ಪೋಷಕರಿಗೆ ಶ್ರೀಗಳು ಆಶಿರ್ವಚನ ಮಾಡಿದರು. ನಂತರ ಪರಿಮಳ ಪ್ರಸಾದ ಹಾಗೂ ಮಂತ್ರಾಕ್ಷತೆ ನೀಡಿ ಆಶಿರ್ವದಿಸಿದ್ದು,ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಮಂತ್ರಾಕ್ಷತೆ, ಪರಿಮಳ ಪ್ರಸಾದ ತಲುಪಿಸಲು ತಿಳಿಸಿದರು.
ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಜೊತೆ ರಿಷಿ ಸುನಾಕ್ ಅವರ ತಂದೆ-ತಾಯಿ ಕೂಡ ಭಾರತಕ್ಕೆ ಬಂದಿದ್ದಾರೆ. ಸದ್ಯ ರಿಷಿ ಸುನಾಕ್ ಅವರ ಕುಟುಂಬ ಆಧ್ಯಾತ್ಮಿಕತೆಯಲ್ಲಿ ತೊಡಗಿಕೊಳ್ಳುತ್ತಿದ್ದು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.
ಶೃಂಗಸಭೆ ವೇಳೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದ ರಿಷಿ ಸುನಕ್ ದಂಪತಿ ಫೋಟೋಗಳು ವೈರಲ್ ಆಗಿದ್ದವು. ಬಳಿಕ ರಿಷಿ ಸುನಾಕ್ ಅವರ ತಾಯಿ ಉಷಾ ಸುನಕ್ ಅವರು ತಮ್ಮ ಬೀಗತಿ ಸುಧಾಮೂರ್ತಿ ಅವರೊಂದಿಗೆ ಬೆಂಗಳೂರಿನ ಶಾಸಕ ಉದಯ ಗರುಡಾಚಾರ್ ಅವರ ಮನೆಯಲ್ಲಿ ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗಿಯಾಗಿದ್ದು ಜನರ ಮೆಚ್ಚುಗೆಗೆ ಕಾರಣವಾಗಿತ್ತು. ಇದೀಗ ರಿಷಿ ಸುನಾಕ್ ಅವರ ಪೋಷಕರು ಮಂತ್ರಾಲಯದ ರಾಯರ ದರ್ಶನ ಮಾಡಿದ್ದಾರೆ.
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…