ಮೈಸೂರು : ಕಿಂಗ್ ಫಿಷರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ.
ಜುಲೈ 15ರಂದು ಬಾಟಲಿಂಗ್ ಆದ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದು ದೃಢವಾಗಿದ್ದು, ಬಿಯರ್ನಲ್ಲಿರುವ ಸೆಡಿಮೆಂಟ್ ಎಂಬ ಅಂಶ ದೇಹಕ್ಕೆ ಅಪಾಯಕಾರಿ ಎಂಬುದು ಲ್ಯಾಬ್ನಲ್ಲಿ ದೃಢವಾಗಿದೆ. ವಿವಿಧ ಕೆಎಸ್ಬಿಸಿಎಲ್ ಹಾಗೂ ಆರ್ವಿಬಿ ಸನ್ನದುದಾರರಿಗೆ ಈ ಬಿಯರ್ ಅನ್ನು ಸಾಗಣೆ ಮಾಡಲಾಗಿದೆ. ಈ ಮದ್ಯವನ್ನು ಅಂಗಡಿಗಳಿಗೆ ವಿತರಣೆ ಮಾಡದಂತೆ ಸೂಚನೆ ನೀಡಲಾಗಿದ್ದು, ಬಿಯರ್ ವಿತರಣೆ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ.
ಲ್ಯಾಬ್ ವರದಿಯಲ್ಲಿ ಅಪಾಯಕಾರಿ ಅಂಶ ದೃಢವಾದ ಹಿನ್ನೆಲೆ ಎಲ್ಲಾ ಬಿಯರ್ ಅನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ನಂಜನಗೂಡಿನ ಯುನೈಟೆಡ್ ಬ್ರಿವರಿಸಿಸ್ ಕಂಪನಿ ಘಟಕದಲ್ಲಿ ತಯಾರಿಸಿದ್ದ ಬಿಯರ್ ಇದಾಗಿದ್ದು, ಈ ಬಗ್ಗೆ ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಜುಲೈ 15 ರಂದು ಬಾಟಲಿಂಗ್ ಆದ ಬಿಯರ್ನಲ್ಲಿ ಈ ಅಂಶ ಪತ್ತೆಯಾಗಿದೆ. ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್ಗೆ ಕಳುಹಿಸಲಾಗಿತ್ತು. ಆಗಸ್ಟ್ 2ರಂದು ಕೆಮಿಕಲ್ ವರದಿ ಬಂದಿದೆ. ವರದಿಯಲ್ಲಿ ಈ ಬಿಯರ್ ಮಾನವ ಬಳಕೆಗೆ ಯೋಗ್ಯವಲ್ಲ ಎಂದು ತಿಳಿಸಿದೆ ಎಂದರು.
ಹೀಗಾಗಿ ಒಟ್ಟು 78,678 ಬಾಕ್ಸ್ ಬಿಯರ್ ಅನ್ನು ಜಪ್ತಿ ಮಾಡಲಾಗಿದೆ. ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ಇದು ವಿತರಣೆಯಾಗಿತ್ತು. ರಿಟೇಲ್ನಲ್ಲಿ ಮಾರಾಟವಾಗದಂತೆ ಆಗದಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…