BREAKING NEWS

ಅಪಾಯಕಾರಿ ಅಂಶ ಪತ್ತೆ : 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್‌ ಜಪ್ತಿ

ಮೈಸೂರು : ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ.

ಜುಲೈ 15ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದು ದೃಢವಾಗಿದ್ದು, ಬಿಯರ್‌ನಲ್ಲಿರುವ ಸೆಡಿಮೆಂಟ್ ಎಂಬ ಅಂಶ ದೇಹಕ್ಕೆ ಅಪಾಯಕಾರಿ ಎಂಬುದು ಲ್ಯಾಬ್‌ನಲ್ಲಿ ದೃಢವಾಗಿದೆ. ವಿವಿಧ ಕೆಎಸ್‌ಬಿಸಿಎಲ್ ಹಾಗೂ ಆರ್‌ವಿಬಿ ಸನ್ನದುದಾರರಿಗೆ ಈ ಬಿಯರ್ ಅನ್ನು ಸಾಗಣೆ ಮಾಡಲಾಗಿದೆ. ಈ ಮದ್ಯವನ್ನು ಅಂಗಡಿಗಳಿಗೆ ವಿತರಣೆ ಮಾಡದಂತೆ ಸೂಚನೆ ನೀಡಲಾಗಿದ್ದು, ಬಿಯರ್ ವಿತರಣೆ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ.

ಲ್ಯಾಬ್ ವರದಿಯಲ್ಲಿ ಅಪಾಯಕಾರಿ ಅಂಶ ದೃಢವಾದ ಹಿನ್ನೆಲೆ ಎಲ್ಲಾ ಬಿಯರ್ ಅನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ನಂಜನಗೂಡಿನ ಯುನೈಟೆಡ್ ಬ್ರಿವರಿಸಿಸ್ ಕಂಪನಿ ಘಟಕದಲ್ಲಿ ತಯಾರಿಸಿದ್ದ ಬಿಯರ್ ಇದಾಗಿದ್ದು, ಈ ಬಗ್ಗೆ ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಜುಲೈ 15 ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಈ ಅಂಶ ಪತ್ತೆಯಾಗಿದೆ. ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಆಗಸ್ಟ್ 2ರಂದು ಕೆಮಿಕಲ್ ವರದಿ ಬಂದಿದೆ. ವರದಿಯಲ್ಲಿ ಈ ಬಿಯರ್ ಮಾನವ ಬಳಕೆಗೆ ಯೋಗ್ಯವಲ್ಲ ಎಂದು ತಿಳಿಸಿದೆ ಎಂದರು.

ಹೀಗಾಗಿ ಒಟ್ಟು 78,678 ಬಾಕ್ಸ್ ಬಿಯರ್ ಅನ್ನು ಜಪ್ತಿ ಮಾಡಲಾಗಿದೆ. ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ಇದು ವಿತರಣೆಯಾಗಿತ್ತು. ರಿಟೇಲ್‌ನಲ್ಲಿ ಮಾರಾಟವಾಗದಂತೆ ಆಗದಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago