BREAKING NEWS

ಅಪಾಯಕಾರಿ ಅಂಶ ಪತ್ತೆ : 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್‌ ಜಪ್ತಿ

ಮೈಸೂರು : ಕಿಂಗ್ ಫಿಷರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ.

ಜುಲೈ 15ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದು ದೃಢವಾಗಿದ್ದು, ಬಿಯರ್‌ನಲ್ಲಿರುವ ಸೆಡಿಮೆಂಟ್ ಎಂಬ ಅಂಶ ದೇಹಕ್ಕೆ ಅಪಾಯಕಾರಿ ಎಂಬುದು ಲ್ಯಾಬ್‌ನಲ್ಲಿ ದೃಢವಾಗಿದೆ. ವಿವಿಧ ಕೆಎಸ್‌ಬಿಸಿಎಲ್ ಹಾಗೂ ಆರ್‌ವಿಬಿ ಸನ್ನದುದಾರರಿಗೆ ಈ ಬಿಯರ್ ಅನ್ನು ಸಾಗಣೆ ಮಾಡಲಾಗಿದೆ. ಈ ಮದ್ಯವನ್ನು ಅಂಗಡಿಗಳಿಗೆ ವಿತರಣೆ ಮಾಡದಂತೆ ಸೂಚನೆ ನೀಡಲಾಗಿದ್ದು, ಬಿಯರ್ ವಿತರಣೆ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ.

ಲ್ಯಾಬ್ ವರದಿಯಲ್ಲಿ ಅಪಾಯಕಾರಿ ಅಂಶ ದೃಢವಾದ ಹಿನ್ನೆಲೆ ಎಲ್ಲಾ ಬಿಯರ್ ಅನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ನಂಜನಗೂಡಿನ ಯುನೈಟೆಡ್ ಬ್ರಿವರಿಸಿಸ್ ಕಂಪನಿ ಘಟಕದಲ್ಲಿ ತಯಾರಿಸಿದ್ದ ಬಿಯರ್ ಇದಾಗಿದ್ದು, ಈ ಬಗ್ಗೆ ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಜುಲೈ 15 ರಂದು ಬಾಟಲಿಂಗ್ ಆದ ಬಿಯರ್‌ನಲ್ಲಿ ಈ ಅಂಶ ಪತ್ತೆಯಾಗಿದೆ. ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಆಗಸ್ಟ್ 2ರಂದು ಕೆಮಿಕಲ್ ವರದಿ ಬಂದಿದೆ. ವರದಿಯಲ್ಲಿ ಈ ಬಿಯರ್ ಮಾನವ ಬಳಕೆಗೆ ಯೋಗ್ಯವಲ್ಲ ಎಂದು ತಿಳಿಸಿದೆ ಎಂದರು.

ಹೀಗಾಗಿ ಒಟ್ಟು 78,678 ಬಾಕ್ಸ್ ಬಿಯರ್ ಅನ್ನು ಜಪ್ತಿ ಮಾಡಲಾಗಿದೆ. ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ಇದು ವಿತರಣೆಯಾಗಿತ್ತು. ರಿಟೇಲ್‌ನಲ್ಲಿ ಮಾರಾಟವಾಗದಂತೆ ಆಗದಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

lokesh

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

3 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

12 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

22 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago