ಮೈಸೂರು : ಕಿಂಗ್ ಫಿಷರ್ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವ ಆತಂಕದ ವಿಚಾರ ಬಯಲಾಗಿದ್ದು, ಈ ಹಿನ್ನೆಲೆ 25 ಕೋಟಿ ರೂ. ಮೌಲ್ಯದ ಕಿಂಗ್ ಫಿಷರ್ ಬಿಯರ್ ಅನ್ನು ಮೈಸೂರಿನ ಅಬಕಾರಿ ಇಲಾಖೆ ಜಪ್ತಿ ಮಾಡಿದೆ.
ಜುಲೈ 15ರಂದು ಬಾಟಲಿಂಗ್ ಆದ ಬಿಯರ್ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿರುವುದು ದೃಢವಾಗಿದ್ದು, ಬಿಯರ್ನಲ್ಲಿರುವ ಸೆಡಿಮೆಂಟ್ ಎಂಬ ಅಂಶ ದೇಹಕ್ಕೆ ಅಪಾಯಕಾರಿ ಎಂಬುದು ಲ್ಯಾಬ್ನಲ್ಲಿ ದೃಢವಾಗಿದೆ. ವಿವಿಧ ಕೆಎಸ್ಬಿಸಿಎಲ್ ಹಾಗೂ ಆರ್ವಿಬಿ ಸನ್ನದುದಾರರಿಗೆ ಈ ಬಿಯರ್ ಅನ್ನು ಸಾಗಣೆ ಮಾಡಲಾಗಿದೆ. ಈ ಮದ್ಯವನ್ನು ಅಂಗಡಿಗಳಿಗೆ ವಿತರಣೆ ಮಾಡದಂತೆ ಸೂಚನೆ ನೀಡಲಾಗಿದ್ದು, ಬಿಯರ್ ವಿತರಣೆ ಮಾಡದಂತೆ ಸುತ್ತೋಲೆ ಹೊರಡಿಸಲಾಗಿದೆ.
ಲ್ಯಾಬ್ ವರದಿಯಲ್ಲಿ ಅಪಾಯಕಾರಿ ಅಂಶ ದೃಢವಾದ ಹಿನ್ನೆಲೆ ಎಲ್ಲಾ ಬಿಯರ್ ಅನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ನಂಜನಗೂಡಿನ ಯುನೈಟೆಡ್ ಬ್ರಿವರಿಸಿಸ್ ಕಂಪನಿ ಘಟಕದಲ್ಲಿ ತಯಾರಿಸಿದ್ದ ಬಿಯರ್ ಇದಾಗಿದ್ದು, ಈ ಬಗ್ಗೆ ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತ ಎ.ರವಿಶಂಕರ್ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ. ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ. ಜುಲೈ 15 ರಂದು ಬಾಟಲಿಂಗ್ ಆದ ಬಿಯರ್ನಲ್ಲಿ ಈ ಅಂಶ ಪತ್ತೆಯಾಗಿದೆ. ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್ಗೆ ಕಳುಹಿಸಲಾಗಿತ್ತು. ಆಗಸ್ಟ್ 2ರಂದು ಕೆಮಿಕಲ್ ವರದಿ ಬಂದಿದೆ. ವರದಿಯಲ್ಲಿ ಈ ಬಿಯರ್ ಮಾನವ ಬಳಕೆಗೆ ಯೋಗ್ಯವಲ್ಲ ಎಂದು ತಿಳಿಸಿದೆ ಎಂದರು.
ಹೀಗಾಗಿ ಒಟ್ಟು 78,678 ಬಾಕ್ಸ್ ಬಿಯರ್ ಅನ್ನು ಜಪ್ತಿ ಮಾಡಲಾಗಿದೆ. ಗುಣಮಟ್ಟದ ಬಿಯರ್ ತಯಾರು ಮಾಡದ ಕಾರಣ ಕಂಪನಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಲ ಡಿಪೋದಿಂದ ಅಂಗಡಿಗಳಿಗೂ ಇದು ವಿತರಣೆಯಾಗಿತ್ತು. ರಿಟೇಲ್ನಲ್ಲಿ ಮಾರಾಟವಾಗದಂತೆ ಆಗದಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…