ಟೆಲ್ ಅವಿವ್ : ಹಮಾಸ್ ಉಗ್ರರ ನಿಯಂತ್ರಣದಲ್ಲಿರುವ ಗಾಜಾಪಟ್ಟಿಯಿಂದ ಇಸ್ರೇಲ್ ಮೇಲೆ ಬರೋಬ್ಬರಿ 5,000 ರಾಕೆಟ್ ದಾಳಿ ಮಾಡಲಾಗಿದ್ದು, ಇದೀಗ ಇಸ್ರೇಲ್ ಯುದ್ಧದ ಘೋಷಣೆ ಮಾಡಿದೆ.
ಶನಿವಾರ ಮುಂಜಾನೆ ಗಾಜಾಪಟ್ಟಿಯಿಂದ 5,000 ರಾಕೆಟ್ಗಳ ದಾಳಿ ನಡೆಸಲಾಗಿದ್ದು, ಹಮಾಸ್ ಬಂಡುಕೋರರು ಇಸ್ರೇಲ್ ಗಡಿಯೊಳಗೆ ನುಗ್ಗಿದ್ದಾರೆ. ಈ ವೇಳೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ಘೋಷಿಸಿದ್ದಾರೆ.
ಹಮಾಸ್ ಬಂಡುಕೋರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ.
ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲಿಯೇ ಭದ್ರತಾ ಮುಖ್ಯಸ್ಥರ ಸಭೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ತನ್ನ ಕೃತ್ಯಗಳಿಗಾಗಿ ಹಮಾಸ್ ಭಾರೀ ಬೆಲೆ ತೆರಬೇಕಾಗಲಿದೆ ಎಂದು ನೆತನ್ಯಾಹು ಸರ್ಕಾರ ಎಚ್ಚರಿಕೆ ನೀಡಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…