ಮುಂಬೈ : 2,000 ರೂಪಾಯಿ ಮುಖಬೆಲೆಯ 1.80 ಲಕ್ಷ ಕೋಟಿ ರೂಪಾಯಿ ಮೌಲ್ಯದ ಹಣ ಬ್ಯಾಂಕ್ ಗೆ ಮರಳಿ ಬಂದಿದೆ ಎಂದು ರಿಸರ್ವ್ ಬ್ಯಾಂಕ್ ಗೌರ್ನರ್ ಶಕ್ತಿಕಾಂತ್ ದಾಸ್ ಮಾಹಿತಿ ನೀಡಿದ್ದಾರೆ.
ನೋಟು ಹಿಂತೆಗೆತದ ನಿರ್ಧಾರ ಪ್ರಕಟಿಸಿದಾಗಿನಿಂದ ಈವರೆಗೂ ಒಟ್ಟು ಚಲಾವಣೆಯಲ್ಲಿದ್ದ 2,000 ರೂಪಾಯಿ ಮುಖಬೆಲೆಯ ಶೇ.50 ರಷ್ಟು ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಯೊಳಗೆ ವಾಪಸ್ ಬಂದಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದ್ದಾರೆ. 2,000 ರೂಪಾಯಿ ನೋಟುಗಳ ಶೇ.85 ರಷ್ಟು ಹಣ ಬ್ಯಾಂಕ್ ಖಾತೆಗಳಿಗೆ ಠೇವಣಿಯ ರೂಪದಲ್ಲಿ ವಾಪಸ್ ಬರುತ್ತಿದೆ, ಇದು ನೀರೀಕ್ಷಿತ ಮಟ್ಟದಲ್ಲಿದೆ ಎಂದು ಆರ್ ಬಿಐ ಗೌರ್ನರ್ ತಿಳಿಸಿದ್ದಾರೆ.
ಮೇ.23 ರಿಂದ 2000 ರೂಪಾಯಿ ಮುಖಬೆಲೆಯ ನೋಟುಗಳ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಸೆ.30 ವರೆಗೆ ನೋಟುಗಳ ಬದಲಾವಣೆಗೆ ಅವಕಾಶ ಇದೆ. ಇದೇ ವೇಳೆ 500 ರೂಪಾಯಿ ನೋಟುಗಳನ್ನು ಹಿಂಪಡೆಯುವ ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮರುಪರಿಚಯಿಸುವ ಯೋಜನೆ ಆರ್ ಬಿಐ ಮುಂದಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ ಎಂದು ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…