ಕೋಲಾರ: ‘ಜರ್ಮನಿಯ ಹಿಟ್ಲರ್ ಹಾಗೂ ಇಟಲಿಯ ಮುಸಲೋನಿ ಅವರ ನಾಯಕತ್ವವನ್ನು ಒಪ್ಪಿಕೊಂಡವರು ಈಗ ದೇಶ ನಡೆಸುತ್ತಿದ್ದಾರೆ. ದೇಶದಲ್ಲಿ ಹಿಟ್ಲರ್ ಹಾಗೂ ಮುಸಲೋನಿ ವಂಶಸ್ಥರು ಇದ್ದರೆ ಅದು ಆರ್ಎಸ್ಎಸ್ ಹಾಗೂ ಹಿಂದೂ ಮಹಾಸಭಾದವರು’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ನಡೆಯಲಿರುವ ‘ಜೈ ಭಾರತ್’ ಸಮಾವೇಶ ಆಯೋಜನೆಗೆ ನಡೆದ ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಸಭೆ ಅವರು ಮಾತನಾಡಿದರು.
‘ದೇಶದ ಜನರಲ್ಲಿ ಬೆದರಿಕೆ ಹುಟ್ಟಿಸಲು ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ರಾಹುಲ್ ಅವರಿಗೇ ಈ ರೀತಿ ಮಾಡಿದ ಮೇಲೆ ಉಳಿದವರ ವಿಚಾರದಲ್ಲಿ ಸುಮ್ಮನಿರುತ್ತಾರಾ ಎಂಬ ಭಯ, ಆತಂಕ ನಿರ್ಮಿಸಲು’ ಎಂದರು.
‘ಬಿಜೆಪಿಗೆ ಯಾವತ್ತೂ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಒಂದು ದೇಶ, ಒಂದು ನಾಯಕತ್ವ, ಒಂದು ಭಾಷೆ ಮೇಲೆ ನಂಬಿಕೆ ಇಟ್ಟವರು’ ಎಂದು ಟೀಕಿಸಿದರು.
‘ರಾಹುಲ್ ಗಾಂಧಿ ಹೇಳಿರುವುದರಲ್ಲಿ ತಪ್ಪೇನಿದೆ? ಲಲಿತ್ ಮೋದಿ, ನೀರವ್ ಮೋದಿ ಓಡಿ ಹೋಗಿಲ್ಲವೇ? ದೇಶದ ದುಡ್ಡನ್ನು ಲೂಟಿ ಮಾಡಿದವನಿಗೆ ಏನೆಂದು ಕರೆಯಬೇಕು? ಸಾಧು, ಸಂತರು, ರಾಷ್ಟ್ರಭಕ್ತ ಎಂದು ಕರೆಯಬೇಕೇ’ ಎಂದು ಪ್ರಶ್ನಿಸಿದರು. ಜನೆ ಸಂಬಂಧ ಶನಿವಾರ ನಗರ ಹೊರವಲಯದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…