BREAKING NEWS

ಆರ್‌ಎಸ್‌ಎಸ್‌, ಹಿಂದೂ ಮಹಾಸಭಾದವರು ಹಿಟ್ಲರ್, ಮುಸಲೋನಿ ವಂಶಸ್ಥರು: ಸಿದ್ದರಾಮಯ್ಯ

ಕೋಲಾರ: ‘ಜರ್ಮನಿಯ ಹಿಟ್ಲರ್‌ ಹಾಗೂ ಇಟಲಿಯ ಮುಸಲೋನಿ ಅವರ ನಾಯಕತ್ವವನ್ನು ಒಪ್ಪಿಕೊಂಡವರು ಈಗ ದೇಶ ನಡೆಸುತ್ತಿದ್ದಾರೆ. ದೇಶದಲ್ಲಿ ಹಿಟ್ಲರ್‌ ಹಾಗೂ ಮುಸಲೋನಿ ವಂಶಸ್ಥರು ಇದ್ದರೆ ಅದು ಆರ್‌ಎಸ್‌ಎಸ್‌ ಹಾಗೂ ಹಿಂದೂ ಮಹಾಸಭಾದವರು’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ನಡೆಯಲಿರುವ ‘ಜೈ ಭಾರತ್’ ಸಮಾವೇಶ ಆಯೋಜನೆಗೆ ನಡೆದ ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಸಭೆ ಅವರು ಮಾತನಾಡಿದರು.

‘ದೇಶದ ಜನರಲ್ಲಿ ಬೆದರಿಕೆ ಹುಟ್ಟಿಸಲು ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ರಾಹುಲ್‌ ಅವರಿಗೇ ಈ ರೀತಿ ಮಾಡಿದ ಮೇಲೆ ಉಳಿದವರ ವಿಚಾರದಲ್ಲಿ ಸುಮ್ಮನಿರುತ್ತಾರಾ ಎಂಬ ಭಯ, ಆತಂಕ ನಿರ್ಮಿಸಲು’ ಎಂದರು.

‘ಬಿಜೆಪಿಗೆ ಯಾವತ್ತೂ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಒಂದು ದೇಶ, ಒಂದು ನಾಯಕತ್ವ, ಒಂದು ಭಾಷೆ ಮೇಲೆ ನಂಬಿಕೆ ಇಟ್ಟವರು‍’ ಎಂದು ಟೀಕಿಸಿದರು.

‘ರಾಹುಲ್ ಗಾಂಧಿ ಹೇಳಿರುವುದರಲ್ಲಿ ತಪ್ಪೇನಿದೆ? ಲಲಿತ್ ಮೋದಿ, ನೀರವ್‌ ಮೋದಿ ಓಡಿ ಹೋಗಿಲ್ಲವೇ? ದೇಶದ ದುಡ್ಡನ್ನು ಲೂಟಿ ಮಾಡಿದವನಿಗೆ ಏನೆಂದು ಕರೆಯಬೇಕು? ಸಾಧು, ಸಂತರು, ರಾಷ್ಟ್ರಭಕ್ತ ಎಂದು ಕರೆಯಬೇಕೇ’ ಎಂದು ‌ಪ್ರಶ್ನಿಸಿದರು. ಜನೆ ಸಂಬಂಧ ಶನಿವಾರ ನಗರ ಹೊರವಲಯದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

andolanait

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

8 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

9 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

11 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

14 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

15 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

21 hours ago