ಕೋಲಾರ: ‘ಜರ್ಮನಿಯ ಹಿಟ್ಲರ್ ಹಾಗೂ ಇಟಲಿಯ ಮುಸಲೋನಿ ಅವರ ನಾಯಕತ್ವವನ್ನು ಒಪ್ಪಿಕೊಂಡವರು ಈಗ ದೇಶ ನಡೆಸುತ್ತಿದ್ದಾರೆ. ದೇಶದಲ್ಲಿ ಹಿಟ್ಲರ್ ಹಾಗೂ ಮುಸಲೋನಿ ವಂಶಸ್ಥರು ಇದ್ದರೆ ಅದು ಆರ್ಎಸ್ಎಸ್ ಹಾಗೂ ಹಿಂದೂ ಮಹಾಸಭಾದವರು’ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ನಡೆಯಲಿರುವ ‘ಜೈ ಭಾರತ್’ ಸಮಾವೇಶ ಆಯೋಜನೆಗೆ ನಡೆದ ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಸಭೆ ಅವರು ಮಾತನಾಡಿದರು.
‘ದೇಶದ ಜನರಲ್ಲಿ ಬೆದರಿಕೆ ಹುಟ್ಟಿಸಲು ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ರಾಹುಲ್ ಅವರಿಗೇ ಈ ರೀತಿ ಮಾಡಿದ ಮೇಲೆ ಉಳಿದವರ ವಿಚಾರದಲ್ಲಿ ಸುಮ್ಮನಿರುತ್ತಾರಾ ಎಂಬ ಭಯ, ಆತಂಕ ನಿರ್ಮಿಸಲು’ ಎಂದರು.
‘ಬಿಜೆಪಿಗೆ ಯಾವತ್ತೂ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಒಂದು ದೇಶ, ಒಂದು ನಾಯಕತ್ವ, ಒಂದು ಭಾಷೆ ಮೇಲೆ ನಂಬಿಕೆ ಇಟ್ಟವರು’ ಎಂದು ಟೀಕಿಸಿದರು.
‘ರಾಹುಲ್ ಗಾಂಧಿ ಹೇಳಿರುವುದರಲ್ಲಿ ತಪ್ಪೇನಿದೆ? ಲಲಿತ್ ಮೋದಿ, ನೀರವ್ ಮೋದಿ ಓಡಿ ಹೋಗಿಲ್ಲವೇ? ದೇಶದ ದುಡ್ಡನ್ನು ಲೂಟಿ ಮಾಡಿದವನಿಗೆ ಏನೆಂದು ಕರೆಯಬೇಕು? ಸಾಧು, ಸಂತರು, ರಾಷ್ಟ್ರಭಕ್ತ ಎಂದು ಕರೆಯಬೇಕೇ’ ಎಂದು ಪ್ರಶ್ನಿಸಿದರು. ಜನೆ ಸಂಬಂಧ ಶನಿವಾರ ನಗರ ಹೊರವಲಯದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…