BREAKING NEWS

ಆರ್‌ಎಸ್‌ಎಸ್‌, ಹಿಂದೂ ಮಹಾಸಭಾದವರು ಹಿಟ್ಲರ್, ಮುಸಲೋನಿ ವಂಶಸ್ಥರು: ಸಿದ್ದರಾಮಯ್ಯ

ಕೋಲಾರ: ‘ಜರ್ಮನಿಯ ಹಿಟ್ಲರ್‌ ಹಾಗೂ ಇಟಲಿಯ ಮುಸಲೋನಿ ಅವರ ನಾಯಕತ್ವವನ್ನು ಒಪ್ಪಿಕೊಂಡವರು ಈಗ ದೇಶ ನಡೆಸುತ್ತಿದ್ದಾರೆ. ದೇಶದಲ್ಲಿ ಹಿಟ್ಲರ್‌ ಹಾಗೂ ಮುಸಲೋನಿ ವಂಶಸ್ಥರು ಇದ್ದರೆ ಅದು ಆರ್‌ಎಸ್‌ಎಸ್‌ ಹಾಗೂ ಹಿಂದೂ ಮಹಾಸಭಾದವರು’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ನಡೆಯಲಿರುವ ‘ಜೈ ಭಾರತ್’ ಸಮಾವೇಶ ಆಯೋಜನೆಗೆ ನಡೆದ ಶನಿವಾರ ಇಲ್ಲಿ ಹಮ್ಮಿಕೊಂಡಿದ್ದ ಸಭೆ ಅವರು ಮಾತನಾಡಿದರು.

‘ದೇಶದ ಜನರಲ್ಲಿ ಬೆದರಿಕೆ ಹುಟ್ಟಿಸಲು ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ರಾಹುಲ್‌ ಅವರಿಗೇ ಈ ರೀತಿ ಮಾಡಿದ ಮೇಲೆ ಉಳಿದವರ ವಿಚಾರದಲ್ಲಿ ಸುಮ್ಮನಿರುತ್ತಾರಾ ಎಂಬ ಭಯ, ಆತಂಕ ನಿರ್ಮಿಸಲು’ ಎಂದರು.

‘ಬಿಜೆಪಿಗೆ ಯಾವತ್ತೂ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಒಂದು ದೇಶ, ಒಂದು ನಾಯಕತ್ವ, ಒಂದು ಭಾಷೆ ಮೇಲೆ ನಂಬಿಕೆ ಇಟ್ಟವರು‍’ ಎಂದು ಟೀಕಿಸಿದರು.

‘ರಾಹುಲ್ ಗಾಂಧಿ ಹೇಳಿರುವುದರಲ್ಲಿ ತಪ್ಪೇನಿದೆ? ಲಲಿತ್ ಮೋದಿ, ನೀರವ್‌ ಮೋದಿ ಓಡಿ ಹೋಗಿಲ್ಲವೇ? ದೇಶದ ದುಡ್ಡನ್ನು ಲೂಟಿ ಮಾಡಿದವನಿಗೆ ಏನೆಂದು ಕರೆಯಬೇಕು? ಸಾಧು, ಸಂತರು, ರಾಷ್ಟ್ರಭಕ್ತ ಎಂದು ಕರೆಯಬೇಕೇ’ ಎಂದು ‌ಪ್ರಶ್ನಿಸಿದರು. ಜನೆ ಸಂಬಂಧ ಶನಿವಾರ ನಗರ ಹೊರವಲಯದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

andolanait

Recent Posts

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

31 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

1 hour ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

10 hours ago