BREAKING NEWS

ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ : ಪಿಎಫ್‍ಐ ಸದಸ್ಯ ಅರೆಸ್ಟ್

ತಿರುವನಂತನಪುರಂ : 2022ರ ಏಪ್ರಿಲ್‍ನಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ.

ಆರೋಪಿ ಸಹೀರ್ ಕೆವಿ ಕೃತ್ಯದ ನಂತರ ತಲೆಮರೆಸಿಕೊಂಡಿದ್ದ. ಅಲ್ಲದೆ ಹತ್ಯೆಯಲ್ಲಿ ಪಾಲ್ಗೊಂಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ. ಆತನ ಸುಳಿವು ನಿಡಿದವರಿಗೆ 4 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‍ಐಎ ಘೋಷಣೆ ಮಾಡಿತ್ತು. ಪಾಲಕ್ಕಾಡ್ ಸಂಬಂಧಿಕರ ಮನೆಯಲ್ಲಿ ಆತ ಅಡಗಿರುವುದನ್ನು ಪತ್ತೆಹಚ್ಚಿದ್ದ ಎನ್‍ಐಎ ಬಂಧಿಸಿದೆ.

ಪಿಎಫ್‍ಐನ ಪಟ್ಟಾಂಬಿ ಏರಿಯಾ ಅಧ್ಯಕ್ಷನಾಗಿದ್ದ ಆರೋಪಿಯು ಸಮುದಾಯದ ಸದಸ್ಯರಲ್ಲಿ ಭಯೋತ್ಪಾದನೆಯ ವಿಚಾರಗಳನ್ನು ಬಿತ್ತುತ್ತಿದ್ದ. 2047ರ ಹೊತ್ತಿಗೆ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸುವ ಉದ್ದೇಶದಿಂದ ಸಂಘಟನೆಯ ಸದಸ್ಯರನ್ನು ತಯಾರಿ ಮಾಡುತ್ತಿದ್ದ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ. 17ರಂದು ಪಿಎಫ್‍ಐ ಸದಸ್ಯರು ಸೇರಿದಂತೆ 59 ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಆರೋಪಿಗಳಲ್ಲಿ ಒಬ್ಬನಾದ ಅಬ್ದುಲ್ ನಾಸರ್ ಜ.2 ರಂದು ಸಾವನ್ನಪ್ಪಿದ್ದ. ತಲೆಮರೆಸಿಕೊಂಡಿರುವ ಉಳಿದ 11 ಆರೋಪಿಗಳನ್ನು ಪತ್ತೆಹಚ್ಚಲು ಎನ್‍ಐಎ ಬಲೆ ಬೀಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

38 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

12 hours ago