BREAKING NEWS

ಬರಲಿದೆ 100 ರೂ. ನಾಣ್ಯ! : “ಮನ್‌ ಕೀ ಬಾತ್‌” 100ನೇ ಆವೃತ್ತಿಯಲ್ಲಿ ಅನಾವರಣ

ನವದೆಹಲಿ: ನಾವೆಲ್ಲರೂ 1, 2, 5, 10 ಮತ್ತು 20 ರೂ. ಕಾಯಿನ್‌ಗಳನ್ನು ಬಳಸಿದ್ದೇವೆ. ಶೀಘ್ರದಲ್ಲೇ ಭಾರತ ಸರ್ಕಾರ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಲಿದೆ. ಆದರೆ ಇದು ನಿತ್ಯ ಬಳಕೆಗೆ ಸಿಗುವುದು ಅಪರೂಪ. ನಿರ್ದಿಷ್ಟ ಸಂಖ್ಯೆಯ ನಾಣ್ಯಗಳನ್ನು ಮಾತ್ರ ಆರ್‌ಬಿಐ ಟಂಕಿಸಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ “ಮನ್‌ ಕೀ ಬಾತ್‌’ ಬಾನುಲಿ ಕಾರ್ಯಕ್ರಮವು ಶೀಘ್ರದಲ್ಲೇ 100ನೇ ಆವೃತ್ತಿ ಪೂರೈಸುತ್ತಿದೆ. ಇದರ ಸ್ಮರಣಾರ್ಥ ಆರ್‌ಬಿಐ 100 ರೂ. ಮುಖಬೆಲೆಯ ನಾಣ್ಯವನ್ನು ಅನಾವರಣಗೊಳಿಸುತ್ತಿದೆ. ತಮ್ಮ 100ನೇ “ಮನ್‌ ಕೀ ಬಾತ್‌” ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.

ಹೇಗಿರಲಿದೆ ನಾಣ್ಯ?
ನಾಣ್ಯದ ಒಂದು ಬದಿಯಲ್ಲಿ 100 ರೂ. ಮುಖಬೆಲೆಯ ಗುರುತು ಇರಲಿದೆ. ಇನ್ನೊಂದು ಬದಿಯಲ್ಲಿ “ಮನ್‌ ಕೀ ಬಾತ್‌’ 100ನೇ ಆವೃತ್ತಿಯ ಸಂಕೇತವಿದ್ದು, ಇದರಲ್ಲಿ ಧ್ವನಿ ತರಂಗಗಳಿರುವ ಮೈಕ್ರೊಫೋನ್‌ ಚಿತ್ರವಿರಲಿದೆ. ನಾಣ್ಯದ ಒಟ್ಟು ತೂಕ 35 ಗ್ರಾಂ ಇರಲಿದೆ ಎಂದು ಮೂಲಗಳು ತಿಳಿಸಿವೆ.

1 ಲಕ್ಷ ಸ್ಥಳಗಳಲ್ಲಿ ಪ್ರಸಾರ:
“ಮನ್‌ ಕೀ ಬಾತ್‌’ 100ನೇ ಆವೃತ್ತಿಯ ಬಾನುಲಿ ಕಾರ್ಯಕ್ರಮವು ಏ.30ರಂದು ಪ್ರಸಾರವಾಗಲಿದೆ. ಇದು ಆಯ್ದ 1 ಲಕ್ಷ ಸ್ಥಳಗಳಲ್ಲಿ ಪ್ರಸಾರ ಆಗಲಿದೆ.

andolanait

Recent Posts

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

1 min ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

10 mins ago

ಮೈಸೂರು | ಹೀಲಿಯಂ ಸ್ಫೋಟ ಪ್ರಕರಣ: ಶವಗಾರದಲ್ಲಿ ಮೃತ ಲಕ್ಷ್ಮಿಯ ಕುಟುಂಬಸ್ಥರ ಆಕ್ರಂದನ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ…

21 mins ago

ಮಂಡ್ಯ| ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ…

31 mins ago

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

1 hour ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

1 hour ago