BREAKING NEWS

ಬರಲಿದೆ 100 ರೂ. ನಾಣ್ಯ! : “ಮನ್‌ ಕೀ ಬಾತ್‌” 100ನೇ ಆವೃತ್ತಿಯಲ್ಲಿ ಅನಾವರಣ

ನವದೆಹಲಿ: ನಾವೆಲ್ಲರೂ 1, 2, 5, 10 ಮತ್ತು 20 ರೂ. ಕಾಯಿನ್‌ಗಳನ್ನು ಬಳಸಿದ್ದೇವೆ. ಶೀಘ್ರದಲ್ಲೇ ಭಾರತ ಸರ್ಕಾರ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಲಿದೆ. ಆದರೆ ಇದು ನಿತ್ಯ ಬಳಕೆಗೆ ಸಿಗುವುದು ಅಪರೂಪ. ನಿರ್ದಿಷ್ಟ ಸಂಖ್ಯೆಯ ನಾಣ್ಯಗಳನ್ನು ಮಾತ್ರ ಆರ್‌ಬಿಐ ಟಂಕಿಸಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ “ಮನ್‌ ಕೀ ಬಾತ್‌’ ಬಾನುಲಿ ಕಾರ್ಯಕ್ರಮವು ಶೀಘ್ರದಲ್ಲೇ 100ನೇ ಆವೃತ್ತಿ ಪೂರೈಸುತ್ತಿದೆ. ಇದರ ಸ್ಮರಣಾರ್ಥ ಆರ್‌ಬಿಐ 100 ರೂ. ಮುಖಬೆಲೆಯ ನಾಣ್ಯವನ್ನು ಅನಾವರಣಗೊಳಿಸುತ್ತಿದೆ. ತಮ್ಮ 100ನೇ “ಮನ್‌ ಕೀ ಬಾತ್‌” ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.

ಹೇಗಿರಲಿದೆ ನಾಣ್ಯ?
ನಾಣ್ಯದ ಒಂದು ಬದಿಯಲ್ಲಿ 100 ರೂ. ಮುಖಬೆಲೆಯ ಗುರುತು ಇರಲಿದೆ. ಇನ್ನೊಂದು ಬದಿಯಲ್ಲಿ “ಮನ್‌ ಕೀ ಬಾತ್‌’ 100ನೇ ಆವೃತ್ತಿಯ ಸಂಕೇತವಿದ್ದು, ಇದರಲ್ಲಿ ಧ್ವನಿ ತರಂಗಗಳಿರುವ ಮೈಕ್ರೊಫೋನ್‌ ಚಿತ್ರವಿರಲಿದೆ. ನಾಣ್ಯದ ಒಟ್ಟು ತೂಕ 35 ಗ್ರಾಂ ಇರಲಿದೆ ಎಂದು ಮೂಲಗಳು ತಿಳಿಸಿವೆ.

1 ಲಕ್ಷ ಸ್ಥಳಗಳಲ್ಲಿ ಪ್ರಸಾರ:
“ಮನ್‌ ಕೀ ಬಾತ್‌’ 100ನೇ ಆವೃತ್ತಿಯ ಬಾನುಲಿ ಕಾರ್ಯಕ್ರಮವು ಏ.30ರಂದು ಪ್ರಸಾರವಾಗಲಿದೆ. ಇದು ಆಯ್ದ 1 ಲಕ್ಷ ಸ್ಥಳಗಳಲ್ಲಿ ಪ್ರಸಾರ ಆಗಲಿದೆ.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago