BREAKING NEWS

ಬರಲಿದೆ 100 ರೂ. ನಾಣ್ಯ! : “ಮನ್‌ ಕೀ ಬಾತ್‌” 100ನೇ ಆವೃತ್ತಿಯಲ್ಲಿ ಅನಾವರಣ

ನವದೆಹಲಿ: ನಾವೆಲ್ಲರೂ 1, 2, 5, 10 ಮತ್ತು 20 ರೂ. ಕಾಯಿನ್‌ಗಳನ್ನು ಬಳಸಿದ್ದೇವೆ. ಶೀಘ್ರದಲ್ಲೇ ಭಾರತ ಸರ್ಕಾರ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಲಿದೆ. ಆದರೆ ಇದು ನಿತ್ಯ ಬಳಕೆಗೆ ಸಿಗುವುದು ಅಪರೂಪ. ನಿರ್ದಿಷ್ಟ ಸಂಖ್ಯೆಯ ನಾಣ್ಯಗಳನ್ನು ಮಾತ್ರ ಆರ್‌ಬಿಐ ಟಂಕಿಸಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಅವರ “ಮನ್‌ ಕೀ ಬಾತ್‌’ ಬಾನುಲಿ ಕಾರ್ಯಕ್ರಮವು ಶೀಘ್ರದಲ್ಲೇ 100ನೇ ಆವೃತ್ತಿ ಪೂರೈಸುತ್ತಿದೆ. ಇದರ ಸ್ಮರಣಾರ್ಥ ಆರ್‌ಬಿಐ 100 ರೂ. ಮುಖಬೆಲೆಯ ನಾಣ್ಯವನ್ನು ಅನಾವರಣಗೊಳಿಸುತ್ತಿದೆ. ತಮ್ಮ 100ನೇ “ಮನ್‌ ಕೀ ಬಾತ್‌” ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಘೋಷಿಸುವ ಸಾಧ್ಯತೆ ಇದೆ.

ಹೇಗಿರಲಿದೆ ನಾಣ್ಯ?
ನಾಣ್ಯದ ಒಂದು ಬದಿಯಲ್ಲಿ 100 ರೂ. ಮುಖಬೆಲೆಯ ಗುರುತು ಇರಲಿದೆ. ಇನ್ನೊಂದು ಬದಿಯಲ್ಲಿ “ಮನ್‌ ಕೀ ಬಾತ್‌’ 100ನೇ ಆವೃತ್ತಿಯ ಸಂಕೇತವಿದ್ದು, ಇದರಲ್ಲಿ ಧ್ವನಿ ತರಂಗಗಳಿರುವ ಮೈಕ್ರೊಫೋನ್‌ ಚಿತ್ರವಿರಲಿದೆ. ನಾಣ್ಯದ ಒಟ್ಟು ತೂಕ 35 ಗ್ರಾಂ ಇರಲಿದೆ ಎಂದು ಮೂಲಗಳು ತಿಳಿಸಿವೆ.

1 ಲಕ್ಷ ಸ್ಥಳಗಳಲ್ಲಿ ಪ್ರಸಾರ:
“ಮನ್‌ ಕೀ ಬಾತ್‌’ 100ನೇ ಆವೃತ್ತಿಯ ಬಾನುಲಿ ಕಾರ್ಯಕ್ರಮವು ಏ.30ರಂದು ಪ್ರಸಾರವಾಗಲಿದೆ. ಇದು ಆಯ್ದ 1 ಲಕ್ಷ ಸ್ಥಳಗಳಲ್ಲಿ ಪ್ರಸಾರ ಆಗಲಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago